ಸ್ಪೀಕರ್ ಅಂಪೈರ್ ರೀತಿ ಇರಬೇಕು, ಕ್ಲಾಸ್ ಟೀಚರ್ ಅಲ್ಲ- ಸಿದ್ದರಾಮಯ್ಯ ಕಿಡಿ

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ವಿಧಾನಸಭೆ ಶಿಷ್ಟಾಚಾರದ ಬಗ್ಗೆ ನಮಗೆ ಗೊತ್ತಿದೆ. ಸ್ಪೀಕರ್ ಮಾಧ್ಯಮದ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ್ದಾರೆ. ಅವರ ವರ್ತನೆ ಅನುಮಾನಕ್ಕೆ ಕಾರಣವಾಗಿದೆ  ಎಂದಿದ್ದಾರೆ. 

 ಕಾಗೇರಿ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ವೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com