'ಸೋನಿಯಾ ನನ್ನೊಂದಿಗೆ ನಿಂತು ದೇಶಕ್ಕೆ ಸಂದೇಶ'-  ಡಿಕೆ ಶಿವಕುಮಾರ್ 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನವಾದಾಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನನ್ನೊಂದಿಗೆ ನಿಂತು ದೇಶಕ್ಕೆ ಸಂದೇಶ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಕಾರ್ಯಕರ್ತರ ಮೇಲೆ ನಿಂತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನವಾದಾಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನನ್ನೊಂದಿಗೆ ನಿಂತು ದೇಶಕ್ಕೆ ಸಂದೇಶ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಕಾರ್ಯಕರ್ತರ ಮೇಲೆ ನಿಂತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸೋನಿಯಾ ಗಾಂಧಿ ನಮ್ಮ ನಾಯಕರು. ಇದು ಇಡೀ ದೇಶಕ್ಕೆ ತಿಳಿದಿರುವ ಸಂದೇಶವಾಗಿದೆ. ಕಾರ್ಯಕರ್ತರಿಗೆ ಅಗತ್ಯ ಎದುರಾದಾಗ ಪಕ್ಷವೂ ಅವರೊಂದಿಗೆ ನಿಲ್ಲುತ್ತದೆ ಎಂದರು. 

ತಮ್ಮನ್ನು ಬೆಂಬಲಿಸುವಂತೆ ಯಾರನ್ನು ಕೇಳಿರಲಿಲ್ಲ, ಅಥವಾ ನಿರೀಕ್ಷೆ ಕೂಡಾ ಮಾಡಿರಲಿಲ್ಲ. ಆದಾಗ್ಯೂ, ದೇಶಾದ್ಯಂತ ಜನರು ನನ್ನನ್ನು ಬೆಂಬಲಿಸಿದ್ದಾರೆ. ಅವರ ಪ್ರೀತಿ, ವಿಶ್ವಾಸ ತೋರಿಸಿದ್ದಾರೆ. ಅವರ ನಿರೀಕ್ಷೆಗಳನ್ನು ಈಡೇರಿಸಲು ಶಕ್ತಿ ಕೊಡಬೇಕೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ನ್ಯಾಯಕ್ಕಾಗಿ ಹೋರಾಟ ಮಾಡುತ್ತೇನೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರೆಯುವುದಾಗಿ ಡಿಕೆ ಶಿವಕುಮಾರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com