ಸಿದ್ದರಾಮಯ್ಯ ಸರ್ಕಾರ ಸತ್ತ ಬಳಿಕ ಬಿಜೆಪಿ ಸರ್ಕಾರ ಹುಟ್ಟಿದೆ: ಸಿ.ಟಿ.ರವಿ

ಸಿದ್ದರಾಮಯ್ಯ ಅವರಿಂದ ಮೈತ್ರಿ ಸರ್ಕಾರ ಸತ್ತುಹೋದ ಬಳಿಕವೇ ಬಿಜೆಪಿ ಸರ್ಕಾರ ಹುಟ್ಟಿದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿರುಗೇಟು ತಿಳಿಸಿದ್ದಾರೆ.
ಸಿ.ಟಿ ರವಿ
ಸಿ.ಟಿ ರವಿ

ಬೆಂಗಳೂರು: ಸಿದ್ದರಾಮಯ್ಯ ಅವರಿಂದ ಮೈತ್ರಿ ಸರ್ಕಾರ ಸತ್ತುಹೋದ ಬಳಿಕವೇ ಬಿಜೆಪಿ ಸರ್ಕಾರ ಹುಟ್ಟಿದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿರುಗೇಟು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಸತ್ತ ಬಳಿಕವೇ ನಮ್ಮ ಸರ್ಕಾರ ಹುಟ್ಟಿಕೊಂಡಿದೆ. ಕಾಂಗ್ರೆಸ್ ಈಗ ಸತ್ತು ಹೋಗಿರುವ ಪಕ್ಷ. ಹಾಗಾಗಿ ಅವರು ಸಾವಿನ ಬಗ್ಗೆಯೇ ಮಾತನಾಡುತ್ತಾರೆ ಎಂದು ಕುಹಕವಾಡಿದರು.

ನೆರೆ ಪರಿಹಾರವನ್ನು ಸರ್ಕಾರ 50 ಸಾವಿರ 1 ಲಕ್ಷಕ್ಕೆ ಏರಿಸಲಾಗಿದೆ. ಸತ್ತು ಹೋಗಿರುವರು ಪರಿಹಾರ ಕೋಡಲು ಆಗುವುದಿಲ್ಲ. ಹತಾಶ ಮನೋಭಾವದಿಂದ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com