ಡಿಕೆ ಶಿವಕುಮಾರ್ ಅಳು ಅನುಕಂಪ ಗಿಟ್ಟಿಸುವ ಕೆಲಸ: ಡಾ.ಅಶ್ವತ್ ನಾರಾಯಣ್ 

ಮಾಜಿ ಸಚಿವ ಡಿಕೆ ಶಿವಕುಮಾರ್ ಮೊದಲು ರಾಜಕೀಯ ಮಾಡುವುದನ್ನು ಬಿಡಬೇಕು. ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಉಪಮುಖ್ಯಮಂತ್ರಿ
ಉಪಮುಖ್ಯಮಂತ್ರಿ

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಮೊದಲು ರಾಜಕೀಯ ಮಾಡುವುದನ್ನು ಬಿಡಬೇಕು. ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಗೌರಿ- ಗಣೇಶ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಡಿಕೆ ಶಿವಕುಮಾರ್ ಮಾಡಿರುವ ಕೆಲಸಗಳ ಬಗ್ಗೆ ಪರಿಶೀಲನೆ ಆಗಬೇಕು ಅದು ಆಗುತ್ತಿದೆ. ಅವರು ಏನು ಮಾಡಿದ್ದಾರೆ, ಏನಾಗಿದೆ, ಏನು ಹೋಗಿದೆ ಎಂಬುದು ಎಲ್ಲವೂ ಸಮಾಜಕ್ಕೆ ತಿಳಿದಿದೆ ಎಂದು ಟಾಂಗ್ ನೀಡಿದರು.

ಡಿಕೆ ಶಿವುಕುಮಾರ್ ಬೆಳೆದು ಬಂದ ರೀತಿ, ಮಾಡಿರುವ ಕಾರ್ಯ ಸಮಾಜಕ್ಕೆ ಗೊತ್ತಿದೆ. ಅವರು ಮಾಡಿರುವ ಕರ್ಮಗಳಿಗೆ ಎಲ್ಲವೂ ರಾಜಿ ಆದರೆ ಜನ ಎಲ್ಲಿಗೆ ಹೋಗಬೇಕು ಎಂದು ಅವರು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com