ಡಿಕೆಶಿ ಬಂಧನ: ಜಾತಿ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ- ಆರ್.ಅಶೋಕ್

ಮಾಜಿ ಸಚಿವ, ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್  ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಕಾಂಗ್ರೆಸ್  ಪಕ್ಷ ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ ಎಂದು ಕಂದಾಯ ಸಚಿವ ಆರ್ . ಅಶೋಕ್ ಟೀಕಿಸಿದ್ದಾರೆ.
ಡಿಕೆಶಿವಕುಮಾರ್, ಆರ್ ಅಶೋಕ್
ಡಿಕೆಶಿವಕುಮಾರ್, ಆರ್ ಅಶೋಕ್

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್  ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಕಾಂಗ್ರೆಸ್  ಪಕ್ಷ ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ ಎಂದು ಕಂದಾಯ ಸಚಿವ ಆರ್ . ಅಶೋಕ್ ಟೀಕಿಸಿದ್ದಾರೆ.

ಅಕ್ರಮ ಹಣ ವಹಿವಾಟು ಹಾಗೂ ಸಾಗಾಣಿಕೆಯ ವಿಚಾರವಾಗಿ ಡಿಕೆ ಶಿವಕುಮಾರ್ ಅವರನ್ನು ವಿಚಾರಣಾಧೀನವಾಗಿ ಇಡಿ ಬಂಧಿಸಿದೆ. ಅದಕ್ಕೆ ಕಾಂಗ್ರೆಸ್ ಜಾತಿಯ ಬಣ್ಣ ಬಳ್ಳಿಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಬಂಧನದ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಕೇಂದ್ರ ಸರ್ಕಾರದ ಯಾವುದೇ ಪಾತ್ರ ಇಲ್ಲ. ತನಿಖಾ ಸಂಸ್ಥೆಗಳು ಸಾಂವಿಧಾನಿಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು  ಅಶೋಕ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com