ನವದೆಹಲಿ: ನಾನು ಯಾವುದೇ ತಪ್ಪನ್ನೂ ಮಾಡಿಲ್ಲ, ರಾಜಕೀಯ ದ್ವೇಷಕ್ಕೆ ಗುರಿಯಾಗಿದ್ದೇನೆಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾನು ಮತ್ತೇ ಪುನರುಚ್ಛರಿಸುತ್ತೇನೆ. ನಾನು ಯಾವುದೇ ತಪ್ಪನ್ನೂ ಮಾಡಿಲ್ಲ. ರಾಜಕೀಯ ದ್ವೇಷಗಳಿಗೆ ಗುರಿಯಾಗಿದ್ದೇನೆಂದು ಹೇಳಿದ್ದಾರೆ.
ನಿಮ್ಮ ಬೆಂಬಲ ಹಾಗೂ ಆಶೀರ್ವಾದಗಳು ನನಗಿದೆ. ದೇವರು ಹಾಗೂ ನ್ಯಾಯಾಂಗದ ಮೇಲೆ ನನಗೆ ನಂಬಿಕೆಯಿದೆ. ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಜಯ ಸಾಧಿಸುತ್ತೇನೆಂಬ ವಿಶ್ವಾಸ ನನಗಿದೆ ಎಂದು ಹೇಳಿಕೊಂಡಿದ್ದಾರೆ.
Advertisement