ಬೆಳಗಾವಿ: ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಸಹೋದರ ಸತೀಶ್ ಜಾರಕಿಹೊಳಿ ನಡುವೆ ಮತ್ತೆ ವಾಕ್ ಸಮರ ಭುಗಿಲೆದಿದ್ದೆ.
ಉಪ ಚುನಾವಣೆ ನಡೆದರೆ ಗೋಕಾಕ್ ಕ್ಷೇತ್ರದಿಂದ ಕಿರಿಯ ಸಹೋದರ ಲಖನ್ ಸಹೋದರನನ್ನು ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ.
ಜಾರಕಿಹೊಳಿ ಸಹೋದರರ ನಡುವಿನ ಕೆಟ್ಟ ಪೈಪೋಟಿಗೆ ರಮೇಶ್ ಜಾರಕಿಹೊಳಿ ಸೋದರ ಅಳಿಯ ಅಂಬಿರಾವ್ ಪಾಟೀಲ್ ಕಾರಣರಾಗಿದ್ದು,ಅವರಿಗೆ ಪಾಠ ಕಲಿಸಲು ನಿರ್ಧರಿಸಲಾಗಿದೆ. ಗೋಕಾಕ್ ನಲ್ಲಿ ಅಂಬಿರಾವ್ ಸಾಮ್ರಾಜ್ಯವನ್ನು ನಿರ್ನಾಮ ಮಾಡಲಿದ್ದೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ಲಖಾನ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಹೈ ಕಮಾಂಡ್ ಒಪ್ಪಿಗೆ ನೀಡಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಮತ್ತೊಂದೆಡೆ ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿರುವ ರಮೇಶ್ ಜಾರಕಿಹೊಳಿ, ಗೋಕಾಕ್ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ನಿಲ್ಲಿಸುವ ಮೂಲಕ ಅವರ ಭವಿಷ್ಯವನ್ನು ಹಾಳು ಮಾಡಲು ಸತೀಶ್ ಜಾರಕಿಹೊಳಿ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement