ಬೆಂಗಳೂರು:ಇತ್ತೀಚಿಗೆ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯುವ ಸಾಧ್ಯತೆ ಇಲ್ಲ.
ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವುದು ಕಷ್ಟವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಇತ್ತೀಚಿಗೆ ಉಂಟಾದ ಪ್ರವಾಹದ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆ ಇದ್ದಂತಿಲ್ಲ ಎಂದರು.
ಪ್ರತಿವರ್ಷ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುತಿತ್ತು. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಅಧಿವೇಶನ ನಡೆದಿತ್ತು.ಈ ಬಾರಿ ಅಕ್ಟೋಬರ್ ತಿಂಗಳಲ್ಲಿ ಅಧಿವೇಶನ ನಡೆಸಲು ಬಿಜೆಪಿ ನೇತೃತ್ವದ ಸರ್ಕಾರ ಯೋಜನೆ ರೂಪಿಸಿದೆ ಎಂಬಂತಹ ವರದಿಗಳು ಕೇಳಿಬಂದಿದ್ದವು.
Advertisement