ಮುಖ್ಯಮಂತ್ರಿ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರದ್ದು ಸಹಜ ಸಾವಲ್ಲ: ಎಚ್.ಡಿ ಕುಮಾರಸ್ವಾಮಿ 

ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂಬ ಹೇಳಿಕೆ ನೀಡಿವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ರಾಮನಗರ: ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂಬ ಹೇಳಿಕೆ ನೀಡಿವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಚನ್ನಪಟ್ಟಣದಲ್ಲಿಂದು ಮಾತನಾಡಿದ ಅವರು, ಅನುಮಾನಾಸ್ಪದವಾಗಿ ಸಿಎಂ ಪತ್ನಿ ಸಾವಾಗಿತ್ತು. ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಸತ್ತಿದ್ದರು. ಇದು ಅನುಮಾನಾಸ್ಪದ ಸಾವು ಅಲ್ಲವೇ(?) ಇದರ ಬಗ್ಗೆ ಯಾರು ಕೂಡ ಪ್ರಚಾರ ಮಾಡಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ನಾನು ಸಿಎಂ ಆಗಿದ್ದು ಕೆಲವರಿಗೆ ಸಹಿಸಲು ಆಗಲಿಲ್ಲ, ಸಿಎಂ ಹುದ್ದೆ ಮುಳ್ಳಿನ ಹಾಸಿಗೆ ಆಗಿತ್ತು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದರು.

ನಾನು ಸಿಎಂ ಆಗಿದ್ದ ವೇಳೆ ತೆಗೆದುಕೊಂಡ ಅಭಿವೃದ್ಧಿ ಕಾರ್ಯಕ್ಕೆ ಕಡಿವಾಣ ಹಾಕಿದ್ದಾರೆ. ಸರ್ಕಾರ ತೆಗೆಯಲು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಮುಂದಾಳತ್ವ ವಹಿಸಿಕೊಂಡಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com