ಉಪ ಚುನಾವಣೆ: ಕಾಂಗ್ರೆಸ್ ಜತೆ ಮೈತ್ರಿಗೆ ಗೌಡರ ಒಲವು

ರಾಜ್ಯದಲ್ಲಿ ಎದುರಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ಕದ ತಟ್ಟಿದ್ದಾರೆ. 
ಉಪ ಚುನಾವಣೆ: ಕಾಂಗ್ರೆಸ್ ಜತೆ ಮೈತ್ರಿಗೆ ಗೌಡರ ಒಲವು
ಉಪ ಚುನಾವಣೆ: ಕಾಂಗ್ರೆಸ್ ಜತೆ ಮೈತ್ರಿಗೆ ಗೌಡರ ಒಲವು

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ಕದ ತಟ್ಟಿದ್ದಾರೆ. ಉಪ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಯಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಮನಗಂಡಿರುವ ಗೌಡರು ಇದೀಗ ಕಾಂಗ್ರೆಸ್ ಜತೆ ಸ್ನೇಹ ಹಸ್ತ ಚಾಚಿದ್ದಾರೆ.

ಉಪಚುನಾವಣೆಗೆ ಮೈತ್ರಿ ಬಗ್ಗೆ ಕಾಂಗ್ರೆಸ್ ನಿಂದ ಇನ್ನೂ ಸ್ಪಷ್ಟ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮತ್ತೊಮ್ಮೆ ಕಾಂಗ್ರೆಸ್ ಕದ ಬಡಿದಿದ್ದು, ಆದಷ್ಟು ಬೇಗ ಒಂದು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಮಾಜಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com