ರಾಜಕೀಯಕ್ಕೆ ಬರುವುದಕ್ಕೆ ಕಾಲ ಕೂಡಿ ಬಂದಿದೆ: ಲಖನ್ ಜಾರಕಿಹೊಳಿ

ಉಪಚುನಾವಣೆ ಐಎಎಸ್ ಪರೀಕ್ಷೆ ಇದ್ದ ಹಾಗೆ. ಪರೀಕ್ಷೆ ಇದ್ದಾಗಲೇ ನಾವು ಎದುರಿಸಬೇಕು.ಸಿಕ್ಕ ಸಿಕ್ಕಾಗ ಹೋಗಲು ಆಗುವುದಿಲ್ಲ ಎಂದು ಹೇಳುವ ಮೂಲಕ ಸಹೋದರ ರಮೇಶ್​ ಜಾರಕಿಹೊಳಿಗೆ ಗೋಕಾಕ್​ ಕ್ಷೇತ್ರದ ಕಾಂಗ್ರೆಸ್​ ಸಂಭಾವ್ಯ ಅಭ್ಯರ್ಥಿ ಲಖನ್​ ಜಾರಕಿಹೊಳಿ ಮಾತಿನಲ್ಲಿಯೇ ಚಾಟಿ ಬೀಸಿದ್ದಾರೆ.
ಲಖನ್ ಜಾರಕಿಹೊಳಿ
ಲಖನ್ ಜಾರಕಿಹೊಳಿ

ಬೆಳಗಾವಿ: ಉಪಚುನಾವಣೆ ಐಎಎಸ್ ಪರೀಕ್ಷೆ ಇದ್ದ ಹಾಗೆ. ಪರೀಕ್ಷೆ ಇದ್ದಾಗಲೇ ನಾವು ಎದುರಿಸಬೇಕು.ಸಿಕ್ಕ ಸಿಕ್ಕಾಗ ಹೋಗಲು ಆಗುವುದಿಲ್ಲ ಎಂದು ಹೇಳುವ ಮೂಲಕ ಸಹೋದರ ರಮೇಶ್​ ಜಾರಕಿಹೊಳಿಗೆ ಗೋಕಾಕ್​ ಕ್ಷೇತ್ರದ ಕಾಂಗ್ರೆಸ್​ ಸಂಭಾವ್ಯ ಅಭ್ಯರ್ಥಿ ಲಖನ್​ ಜಾರಕಿಹೊಳಿ ಮಾತಿನಲ್ಲಿಯೇ ಚಾಟಿ ಬೀಸಿದ್ದಾರೆ.

ಗೋಕಾಕ್ ನಲ್ಲಿ ಕೆಲ ಹಳ್ಳಿಗಳಲ್ಲಿ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜನರು ಇಷ್ಟು ದಿನ ನಮಗೆ ರಾಜಕೀಯಕ್ಕೆ ಏಕೆ ಬರುತ್ತಿಲ್ಲ ಎಂದು ಕೇಳುತ್ತಿದ್ದರು. ಈಗ ಆ ಸಮಯ ಬಂದಿದೆ. 25 ವರ್ಷಗಳಿಂದ ನಾವು ನಮ್ಮ ತಂದೆಯವರು ಕಾಂಗ್ರೆಸ್​ನಲ್ಲಿಯೇ ಇದ್ದೇವೆ. ನಾವು ಹಿಂದೆ ನಿಂತು ಬೆಂಬಲ ನೀಡುತ್ತಿದ್ದೆವು. ಆದರೆ, ಈಗ ಕಾಲ ಕೂಡಿ ಬಂದಿದೆ. 

ನಾವು ಸಹ ಈಗ ಮುನ್ನೆಲೆಗೆ ಬಂದು ನಿಂತಿದ್ದೇವೆ.ರಮೇಶ್ ಜಾರಕಿಹೊಳಿ ಅಳಿಯಂದಿರಿಂದ ಗೋಕಾಕ್​ನಲ್ಲಿ ಭ್ರಷ್ಟಾಚಾರ ನಡೆದಿದೆ. ಅವರ ಆಳ್ವಿಕೆಯನ್ನು ನಾವು ಗೋಕಾಕ್​ನಲ್ಲಿ ಅಂತ್ಯಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com