ಸಿ.ಪಿ. ಯೋಗೇಶ್ವರ್ ಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ: 'ಸಾಹುಕಾರ್' ಲಾಬಿಗೆ ಮಣಿಯಿತಾ ಬಿಜೆಪಿ ಹೈಕಮಾಂಡ್?

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಅವರನ್ನು ಮಂತ್ರಿ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಿ.ಪಿ ಯೋಗೇಶ್ವರ್
ಸಿ.ಪಿ ಯೋಗೇಶ್ವರ್
Updated on

ಬೆಂಗಳೂರು: ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಅವರನ್ನು ಮಂತ್ರಿ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ ಯಾರು ಏನೇ ಹೇಳಿದರು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದಾರೆ. ‘ಯೋಗೇಶ್ವರ್‌ ಪರ ಬ್ಯಾಟಿಂಗ್‌ ಮಾಡುವವರು ಸಚಿವ ಸ್ಥಾನ ತ್ಯಾಗ ಮಾಡಲಿ’ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿರುವ ಶಾಸಕ ರೇಣುಕಾಚಾರ್ಯ ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ‘ಯೋಗೇಶ್ವರ ಅವರನ್ನು ಸಚಿವ ಮಾಡುವುದು ಖಚಿತ’ ಎಂದರು.

ಇನ್ನು ಸಿಎಂ ಹೇಳಿಕೆಗೆ ಟಿವಿ ಚಾನೆಲ್ ವೊಂದಕ್ಕೆ ಪ್ರತಿಕ್ರಿಯಿಸಿರುವ ಸಿಪಿ ಯೋಗೇಶ್ವರ್ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ್ದಾರೆ. 

ರಮೇಶ್ ಜಾರಕಿಹೊಳಿ ನನ್ನ ಉತ್ತಮ ಸ್ನೇಹಿತ, ಆದರೆ ಅವರು ಲಾಬಿ ನಡೆಸಿಲ್ಲ, ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ನನಗೆ ಸಚಿವ ಸ್ಥಾನ ನೀಡಿದ್ದಾರೆ. ಒಬ್ಬ ವ್ಯಕ್ತಿಯ ಪ್ರಯತ್ನದಿಂದ ನಾನು ಮಂತ್ರಿಯಾಗುತ್ತಿಲ್ಲ, ಪಕ್ಷ ಮತ್ತು ಸಿಎಂ ಹಾಗೂ ಹೈಕಮಾಂಡ್ ನನ್ನ ಮೇಲೆ ಭರವಸೆ ಇಟ್ಟಿದೆ, ಸಿಎಂ ಮೊದಲೇ ನನಗೆ ಮಾತು ಕೊಟ್ಟಿದ್ದರು, ಆದರೆ ಸಂದರ್ಭ ಒದಗಿ ಬಂದಿರಲಿಲ್ಲ, ಈಗ ಸುಸಮಯ ಬಂದಿದೆ , ಸಿಎಂ ಗೆ ನಾನು ಆಭಾರಿಯಾಗಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com