ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಹಿರಿಯ ನಾಯಕರು

ಮುಖ್ಯಮಂತ್ರಿ ಸ್ಥಾನದಿಂದ ಸಿಎಂ ಯಡಿಯೂರಪ್ಪ ಕೆಳಗಿಳಿಯುತ್ತಾರೆ ಎಂದು ಹಬ್ಬುತ್ತಿರುವ ಸುದ್ದಿಯನ್ನು ನಿರಾಕರಿಸಿರುವ ರಾಜ್ಯ ಬಿಜೆಪಿ ಹಿರಿಯ ನಾಯಕರು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ.
ಯಡಿಯೂರಪ್ಪ ಬೆಂಬಲಕ್ಕೆ ಹಿರಿಯ ನಾಯಕರು
ಯಡಿಯೂರಪ್ಪ ಬೆಂಬಲಕ್ಕೆ ಹಿರಿಯ ನಾಯಕರು
Updated on

ಮೈಸೂರು: ಮುಖ್ಯಮಂತ್ರಿ ಸ್ಥಾನದಿಂದ ಸಿಎಂ ಯಡಿಯೂರಪ್ಪ ಕೆಳಗಿಳಿಯುತ್ತಾರೆ ಎಂದು ಹಬ್ಬುತ್ತಿರುವ ಸುದ್ದಿಯನ್ನು ನಿರಾಕರಿಸಿರುವ ರಾಜ್ಯ ಬಿಜೆಪಿ ಹಿರಿಯ ನಾಯಕರು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ.

ಬಿಎಸ್ ಯಡಿಯೂರಪ್ಪ ಯಾವುದೇ ತಪ್ಪು ಮಾಡಿಲ್ಲ, ಹೀಗಿರುವಾಗ ನಾಯಕತ್ವದ ಬದಲಾವಣೆ ಪ್ರಶ್ನೆ ಏಕೆ ಬರುತ್ತದೆ ಎಂದು ಕಂದಾ ಸಚಿವ ಆರ್.ಅಶೋಕ, ಸಹಕಾರ ಸಚಿವ ಸೋಮಶೇಖರ್, ಮತ್ತು ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ವಿಷಯ ಕೇಂದ್ರ ನಾಯಕರ ಮುಂದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಎಂಟಿಬಿ ನಾಗರಾಜ್, ಆರ್.ಶಂಕರ್ ಮತ್ತಿತರರು ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ತ್ಯಾಗ ಮಾಡಿದ್ದಾರೆ, ಅವರನ್ನು ಸಚಿವರನ್ನಾಗಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧರಿಸುತ್ತಾರೆ, ನಾವು ಕೂಡ ಕೇಂದ್ರ ನಾಯಕರ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆಂದು ವಿಜಯೇಂದ್ರ ತಿಳಿಸಿದರು, ಬಿಜೆಪಿಯಲ್ಲಿ ಬಾಂಬೆ ಟೀಮ್, ಬೆಂಗಳೂರು ಟೀಮ್ ಎಂಬ ಗುಂಪುಗಳಿಲ್ಲ, ನಾವೆಲ್ಲರೂ ಒಂದೇ ಎಂದು ಸೋಮಶೇಖರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com