ಅರ್ಕಾವತಿ ಕೇಸ್‌ನಲ್ಲಿ ಜೈಲಿಗೆ ಹೋಗೋ ಭಯದಿಂದ ಲೋಕಾಯುಕ್ತ ಮುಚ್ಚಿ ಎಸಿಬಿ ತಂದಿದ್ದರು ಸಿದ್ದರಾಮಯ್ಯ: ಹೆಚ್.ವಿಶ್ವನಾಥ್

ಅರ್ಕಾವತಿ ಕೇಸ್'ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.
ಎಹೆಚ್. ವಿಶ್ವನಾಥ್
ಎಹೆಚ್. ವಿಶ್ವನಾಥ್
Updated on

ಬೆಂಗಳೂರು: ಅರ್ಕಾವತಿ ಕೇಸ್'ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುತ್ತಿದ್ದರು. ಅದಕ್ಕಾಗಿಯೇ ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು. ಮತ್ತೆ ಅರ್ಕಾವತಿ ಕೇಸ್ ತೆರೆದರೆ ನೀವು ಎಲ್ಲಿರುತ್ತೀರೆಂದು ತಿಳಿಯುತ್ತದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 

ಇದೇ ವೇಳೆ ನನ್ನನ್ನು ಯಾವ ಕಾರಣಕ್ಕೆ ಸೋಲಿಸಿದಿರಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಯಾವ ಕಾರಣಕ್ಕೆ ಸೋಲು ಕಂಡೆ ಎಂದು ಅವರು ಆತ್ಮಾವಲೋಕನ ಮಾಡಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷವನ್ನು ಡೆಮಾಲಿಶ್ ಮಾಡಿಬಿಟ್ಟರು ಎಂದುಪ ಹೇಳಿದ್ದಾರೆ. 

ಸದಾ ಬೆನ್ನಿಗೆ ಚೂರಿ ಇರೀತಿದ್ದವರಿಗೆ ಈ ನೋವು ಅರ್ಥವಾಗುತ್ತಿದೆ. ಬೇರೆಯವರ ಬೆನ್ನಿಗೆ ಚೂರಿ ಇರಿದು ಆನಂದ ಪಡುತ್ತಿದ್ದರು. ವಿಘ್ನ ಸಂತೋಷಿಗಳಾಗಿದ್ದವರಿಗೆ ಈಗ ನೋವಾಗುತ್ತಿದೆ ಎಂದು ಟಾಂಗ್ ನೀಡಿದ್ದಾರೆ. 

ನಿಮ್ಮದು ಮಾತ್ರ ರಕ್ತ, ಮಾಂಸ, ಮೂಳೆ. ನಮ್ಮದು ತಗಡು ಅಥವಾ ಮರಾನಾ? ನೀವು ಚೂರಿ ಇರಿಯೂವಾಗ ಅದನ್ನು ಗಮನಿಸಲೂ ಇಲ್ಲ. ನಾವು ಎಂತಹ ನೋವು ಅನುಭವಿಸಿದೆವು ಗೊತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ. 

ಜೊತೆಗೆ, ಸಿದ್ದರಾಮಯ್ಯ ಚಾಮುಂಡೇಶ್ವರಿ ಬಿಟ್ಟು ಏಕೆ ಓಡಿ ಹೋದ್ರಿ? ನಿಮಗೆ ಸೋಲಿನ ಸುಳಿವು ತಿಳಿದ ಹಿನ್ನೆಲೆ ಓಡಿ ಹೋಗಿದ್ದೀರಿ. ನಿಮ್ಮ ಜನಪರ ಕಾರ್ಯ ಯೋಜನೆ ಏಕೆ ಕೈಹಿಡಿಯಲಿಲ್ಲ? ನೀವು ಚಾಮುಂಡೇಶ್ವರಿ ಕ್ಷೇತ್ರವನ್ನು ಕಡೆಗಣಿಸಿದ್ದೀರಿ. ನೀವು ಯಾರೋ ಕೆಲವು ಚಮಚಗಳ ಕೈಹಿಡಿದಿರಬಹುದು. ಅದಕ್ಕೆ ನೀವು ಬಾದಾಮಿ ಕ್ಷೇತ್ರದ ಕಡೆ‌ ಮುಖ‌ ಮಾಡಿದಿರಿ. ಯಾವ ಮತದಾರರೂ ನಿಮ್ಮನ್ನು ಸೋಲಿಸಲಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com