10 ವಲಸಿಗ ಶಾಸಕರ ಪ್ರಮಾಣ ವಚನ: ಮೂಲ ಬಿಜೆಪಿಗರಿಗೆ ಇಲ್ಲ ಸಂಪುಟ ವಿಸ್ತರಣೆಯಲ್ಲಿ ಸ್ಥಾನ

ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. 
ಸಂಪುಟ ಸೇರಿದ 10 ಶಾಸಕರು
ಸಂಪುಟ ಸೇರಿದ 10 ಶಾಸಕರು
Updated on

ಬೆಂಗಳೂರು: ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. 

ಕಾಂಗ್ರೆಸ್‌–ಜೆಡಿಎಸ್‌ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ರಾದ 10 ಶಾಸಕರು ಸಚಿವರಾಗುತ್ತಿದ್ದಾರೆ. 

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು

. ರಾಜ್ಯಪಾಲ ವಜುಭಾಯ್‌ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮೊದಲಿಗೆ ಶಾಸಕ ಎಸ್ ಟಿ ಸೋಮಶೇಖರ್ ದೇವರ ಹೆಸರಿನಿಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ನಂತರ, ರಮೇಶ್ ಜಾರಕಿಹೊಳಿ,  ಆನಂದ್ ಸಿಂಗ್, ಕೆ.ಸುಧಾಕರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಬಿ.ಸಿ ಪಾಟೀಲ್. ಕೆ.ಗೋಪಾಲಯ್ಯ. ನಾರಾಯಣಗೌಡ ಮತ್ತು ಶ್ರೀಮಂತ್ ಪಾಟೀಲ್ ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಶಾಸಕರ ಪ್ರಮಾಣ ವಚನ ಸಮಾರಂಭದಲ್ಲಿ  ಬಿ.ಎಸ್ ಯಡಿಯೂರಪ್ಪ ಸರ್ಕಾರದ ಹಲವು ಸಂಪುಟ ಸಚಿವರು ಭಾಗಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com