ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾಗಿದೆ: ಮಹೇಶ್ ಕುಮಟಳ್ಳಿ 

ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾಗಿದೆ: ಮಹೇಶ್ ಕುಮಟಳ್ಳಿ 

ಸಚಿವ ಸ್ಥಾನ ವಂಚಿತ ಶಾಸಕರು ಗುರುವಾರ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನವನ್ನು ಹೊರಹಾಕಿದ್ದಾರೆ.

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರು ಗುರುವಾರ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನವನ್ನು ಹೊರಹಾಕಿದ್ದಾರೆ.


ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಮಹೇಶ್ ಕುಮಟಳ್ಳಿ, ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾಗಿದೆ. ಯಾಕೆ ಹೀಗಾಗಿದೆ ಎಂಬ ಕಾರಣ ತಿಳಿದಿಲ್ಲ. ಸಿಎಂ ನನಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಅವರ ಜೊತೆ ಮಾತನಾಡುತ್ತೇನೆ ಎಂದರು.


ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡುವ ಕೆಲಸ ನಾನು ಮಾಡುವುದಿಲ್ಲ. ನಾನು ಸಚಿವನಾಗಲು ಏನು ತೊಂದರೆ ಇದೆಯೋ ಗೊತ್ತಿಲ್ಲ ಎಂದರು.

Related Stories

No stories found.

Advertisement

X
Kannada Prabha
www.kannadaprabha.com