ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಎಂಟಿಬಿ - ಬಚ್ಚೇಗೌಡ ಮುಖಾಮುಖಿ..!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಂಸದ‌ ಬಚ್ಚೇಗೌಡ ಹಾಗೂ ಅವರ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಆದರೂ ಒಬ್ಬರ ಮುಖ ಒಬ್ಬರು ನೋಡದೇ ಕುದಿಮೌನ ಪ್ರದರ್ಶಿಸಿದ್ದಾರೆ.
ಎಂಟಿಬಿ ನಾಗರಾಜ್ - ಬಚ್ಚೇಗೌಡ
ಎಂಟಿಬಿ ನಾಗರಾಜ್ - ಬಚ್ಚೇಗೌಡ
Updated on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಂಸದ‌ ಬಚ್ಚೇಗೌಡ ಹಾಗೂ ಅವರ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಆದರೂ ಒಬ್ಬರ ಮುಖ ಒಬ್ಬರು ನೋಡದೇ ಕುದಿಮೌನ ಪ್ರದರ್ಶಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ‌ ಬಿಎಸ್ವೈ ನಿವಾಸ ಧವಳಗಿರಿಗೆ ಸಂಸದ ಬಚ್ಚೇಗೌಡ ಭೇಟಿ ನೀಡಿದ್ದರು. ಬಚ್ಚೇಗೌಡ ಯಡಿಯೂರಪ್ಪ ಅವರ ಹುಟ್ಟಿದ ಹಬ್ಬಕ್ಕೆ ಶುಭ ಕೋರಿದರು. ಉಪ ಚುನಾವಣೆಯಲ್ಲಿ ಪುತ್ರನ ಸ್ಪರ್ಧೆ ತಪ್ಪಿಸಲು ವಿಫಲವಾದ ನಂತರ ತುಸು ಅಂತರ ಕಾಯ್ದುಕೊಂಡಿದ್ದ  ಬಚ್ಚೇಗೌಡರ ಇಂದು ಸಿಎಂ ಜೊತೆ ಕೆಲಕಾಲ ಅನೌಪಚಾರಿಕ ಮಾತುಕತೆ ನಡೆಸಿದರು.

ಈ ವೇಳೆ ಹೊಸಕೋಟೆ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಕೂಡ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದರು. ಎಂಟಿಬಿ ಬರುತ್ತಿದ್ದಂತೆ‌ ಬಚ್ಚೇಗೌಡ ಸಿಎಂ ನಿವಾಸದಿಂದ ನಿರ್ಗಮಿಸಿದರು. ಈ ವೇಳೆ ಇಬ್ಬರು ಪರಸ್ಪರ ಎದುರುಬದುರಾದರೂ ಮಾತುಕತೆ ನಡೆಸದೇ ಕುದಿಮೌನ ಹೊರಹಾಕಿದ್ದಾರೆ.

ಬಚ್ಚೇಗೌಡ ನಿರ್ಗಮನದ ನಂತರ ಯಡಿಯೂರಪ್ಪ ಜೊತೆ ಎಂಟಿಬಿ ನಾಗರಾಜ್ ಮಾತುಕತೆ ನಡೆಸಿದರು. ನಿನ್ನೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶುಭ ಕೋರಿದ್ದರೂ ಇಂದು ಮತ್ತೊಮ್ಮೆ ಭೇಟಿಯಾಗಿದ್ದರು. ಬಜೆಟ್ ನಂತರ ಸಂಪುಟ‌ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಯಲ್ಲಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಎಂ.ಟಿ.ಬಿ. ನಾಗರಾಜ್ ಮಾತುಕತೆ ನಡೆಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com