ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ: ರಾಜು ಗೌಡ

ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪ ಅವರ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ ಎಂದು ಬಿಜೆಪಿ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.
ರಾಜು ಗೌಡ
ರಾಜು ಗೌಡ
Updated on

ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪ ಅವರ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ ಎಂದು ಬಿಜೆಪಿ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರು ಮುಖ್ಯಮಂತ್ರಿ ಆಗಬೇಕಾದರೆ ಅದು ಬಿಜೆಪಿಯಿಂದಲೇ ಸಾಧ್ಯ. ಬೇರೆ ಪಕ್ಷದಲ್ಲಿ ಆಗಲು ಸಾಧ್ಯವಿಲ್ಲ. ನಾವೆಲ್ಲರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಶಾಸಕರಾಗಿದ್ದೇವೆ ಎಂದರು.

ಯಡಿಯೂರಪ್ಪನವರ ಅವಧಿ ಮುಗಿದ ಬಳಿಕ ಬಿಜೆಪಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ದಲಿತರಿಗೆ ಸಿಎಂ ಸ್ಥಾನ ಸಿಗುತ್ತದೆ. ಬಿಜೆಪಿಯಿಂದಲೇ ದಲಿತರಿಗೆ ಒಳ್ಳೆಯ ಸ್ಥಾನಮಾನ ಸಿಗಲು ಸಾಧ್ಯ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com