'ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ'

ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ವ್ಯಂಗ್ಯವಾಡಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜತೆ ಮಾತಾಡಿದ ಡಿಕೆಶಿವಕುಮಾರ್, ನಾನು ಬಿಜೆಪಿ ಪ್ರತಿಭಟನೆಯಿಂದ ನನಗೆ ನಡುಕ ಶುರುವಾಗಿದೆ. ಈಗಲೂ ನಡುಗುತ್ತಿದ್ದೇನೆ. ಅವರಿಗೆ ಹೆದರಿ ಮನೆಯಿಂದ ಹೊರಗಡೆ ಬಂದೆ  ಲೇವಡಿ ಮಾಡಿದ್ದಾರೆ.

ಮಾಗಡಿ ರಸ್ತೆಯಲ್ಲಿ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕ್ರೈಸ್ತರು 5 ಎಕರೆ ಜಮೀನು ನೀಡಿದ್ದಾರೆ. ರಾಜಕಾರಣ ಮಾಡಬೇಕೆಂದು ಬಿಜೆಪಿಗರು ಹೀಗೆ ಮಾಡುತ್ತಿದ್ದಾರೆ. ಅವರ ಬಳಿ ಅಧಿಕಾರ ಇದೆ ಮಾಡಲಿ. ಎಲ್ಲಿಂದ ಎಷ್ಟು ಜನ ಬಂದಿದ್ದಾರೆ ಎಂಬುದು ನನಗೆ ಗೊತ್ತಿದೆ. ಯಾರು ಜನರನ್ನು ಕರೆಸಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ.

ಅವರಿಗೆ ಮಂತ್ರಿಯಾಗಬೇಕು ಎನ್ನುವ ಆಸೆಯಿಂದ ಹೀಗೆ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದು ಪರೋಕ್ಷವಾಗಿ ಮಾಜಿ ಶಾಸಕ ಸಿ.ಪಿ ಯೋಗೇಶ್ವರ್​​ ವಿರುದ್ಧ ಡಿಕೆಶಿ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com