ಯಡಿಯೂರಪ್ಪ ನುಡಿದಂತೆ ನಡೆಯುವಂತ ನಾಯಕ: ಸಂಪುಟದಲ್ಲಿ ಸ್ಥಾನ ಖಚಿತ- ವಿಶ್ವನಾಥ್ 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವಂತ ನಾಯಕ, ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ  ಹೆಚ್ . ವಿಶ್ವನಾಥ್ ಹೇಳಿದ್ದಾರೆ.
ಹೆಚ್. ವಿಶ್ವನಾಥ್
ಹೆಚ್. ವಿಶ್ವನಾಥ್
Updated on

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವಂತ ನಾಯಕ, ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ  ಹೆಚ್ . ವಿಶ್ವನಾಥ್ ಹೇಳಿದ್ದಾರೆ.

ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಬಂಡಾಯ ಶಾಸಕರಲ್ಲಿ ಒಬ್ಬರಾಗಿದ ವಿಶ್ವನಾಥ್, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಪಿ. ಮಂಜುನಾಥ್ ವಿರುದ್ಧ 39 ಸಾವಿರ ಮತಗಳ ಅಂತರದಿಂದ ಸೋತಿದ್ದರು.

ಯಡಿಯೂರಪ್ಪ ನೀಡಿರುವ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ರೀತಿಯ ಅನುಮಾನ, ಅಥವಾ ಭಯ ಅಥವಾ ಭೀತಿ ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದಿರುವ ಎಲ್ಲಾ 17 ಶಾಸಕರನ್ನು ಸಚಿವರನ್ನಾಗಿ ಮಾಡುತ್ತಾರೆ. ಅವರನ್ನು ನಾನು ನಂಬುತ್ತೇನೆ. ನಮ್ಮ ತ್ಯಾಗವಿಲ್ಲದೆ ಬಿಜೆಪಿ ಸರ್ಕಾರ ಹೇಗೆ ರಚನೆಯಾಗಲು ಸಾಧ್ಯವಿತ್ತು ಎಂದು ಪ್ರಶ್ನಿಸಿದರು?

ಜೂನ್ ತಿಂಗಳಲ್ಲಿ ವಿಧಾನಪರಿಷತ್ತಿನಲ್ಲಿ 12 ಸ್ಥಾನಗಳು ಖಾಲಿಯಾಗಲಿದ್ದು, ಎಂಟಿಬಿ ನಾಗರಾಜ್ ಜೊತೆಗೆ ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ಇದೆ. ಉಪಚುನಾವಣೆಯಲ್ಲಿ ಗೆಲ್ಲಲಿ ಅಥವಾ ಸೋತಿದ್ದರೂ ಯಡಿಯೂರಪ್ಪ ನೀಡಿದ್ದ ಭರವಸೆಯಂತೆ ನಡೆಯುತ್ತಾರೆ ಎಂಬ ವಿಶ್ವಾಸ ಹೊಂದಿರುವುದಾಗಿ ವಿಶ್ವನಾಥ್ ತಿಳಿಸಿದರು. ವಿಶ್ವನಾಥ್, ನಾಗರಾಜ್ ಹಾಗೂ ಶಂಕರ್ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸದಂತೆ ಯಡಿಯೂರಪ್ಪ ಹೇಳಿದ್ದರು. ಆದರೆ, ಅವರ ಮಾತು ಫಲಿತಾಂಶದ ನಂತರ ಮನವರಿಕೆಯಾಗಿದೆ. ಯಾವುದೇ ನಿಗಮ ಅಥವಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗುವುದಿಲ್ಲ, ಸದ್ಯದಲ್ಲಿಯೇ ಸಚಿವರಾಗಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com