ಮಂಗಳೂರು ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಹೆಚ್'ಡಿಕೆ ವಿರುದ್ಧ ಡಿಸಿಎಂ ಅಶ್ವತ್ಥ್ ನಾರಾಯಣ್ ಕಿಡಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಡಿಸಿಎಂ ಅಶ್ವತ್ಥ್ ನಾರಾಯಣ್
ಡಿಸಿಎಂ ಅಶ್ವತ್ಥ್ ನಾರಾಯಣ್
Updated on

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು ಎಂದು ಕುಮಾರಸ್ವಾಮಿ ಅಂದುಕೊಂಡಿದ್ದಾರೆ. ಆದರೆ, ಅವರು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು. ಬಾಂಬ್ ಇಟ್ಟಿರುವ ವ್ಯಕ್ತಿ ಈ ಹಿಂದೆ ಹುಸಿ ಬಾಂಬ್ ಕರೆ ಮಾಡಿದ್ದ. ಈ ಬಾರಿ ತಾನೇ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ. 

ಇನ್ನು ಮುಂದೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಕೆಲ ಸಂಘಟನೆಗಳ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸುತ್ತೇನೆ. ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ. ಇಂತಹ ಸಂಘಟನಗೆಳನ್ನು ಬೆಳೆಯಲು ಬಿಡುವುದು ಅತ್ಯಂತ ಅಪಾಯಕಾರಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com