'ಸೋತಿದ್ದರೂ ಎಂಟಿಬಿಗೆ ಟಿಕೆಟ್ ನೀಡಲಾಗಿದೆ, ಎಲ್ಲಾ ಶಾಸಕರನ್ನೂ ಒಗ್ಗೂಡಿಸಿದ ವಿಶ್ವನಾಥ್ ಗೆ ಏಕಿಲ್ಲ?'

ಎಚ್. ವಿಶ್ವನಾಥ್‌ಗೆ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಏಕೆ  ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಹೇಳಿದ್ದಾರೆ. 
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್

ಮೈಸೂರು: ಎಚ್. ವಿಶ್ವನಾಥ್‌ಗೆ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಏಕೆ  ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಹೇಳಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೋರ್ ಕಮಿಟಿಯಲ್ಲಿ ವಿಶ್ವನಾಥ್ ಅವರ ಹೆಸರು ಅಂತಿಮವಾಗಿತ್ತು. ಆ ಲಿಸ್ಟ್‌ನಲ್ಲಿ ನಾಲ್ಕನೇ ಅಭ್ಯರ್ಥಿ ಹೆಸರು ಫೈನಲ್ ಆಗಿರಲಿಲ್ಲ. ನಮ್ಮ ರಾಜ್ಯದಿಂದ ಯಾವುದೇ ಪಟ್ಟಿ ಕಳುಹಿಸಿದ್ದರೂ ಸರಿಯೇ ರಾಷ್ಟ್ರೀಯ ಪಕ್ಷದಲ್ಲಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಹೀಗಾಗಿ ಯಾಕಾಗಿ ಅವರಿಗೆ
ಟಿಕೆಟ್ ತಪ್ಪಿದೆ ಎಂಬುದು ಗೊತ್ತಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದರು.

ಹೆಚ್​.ವಿಶ್ವನಾಥ್​ ಫೋನ್ ಮಾಡಿ ಮಾತನಾಡಿದ್ದರು. ಮುಂದೆ ಏನು ಮಾಡಬೇಕು ಎಂಬುದನ್ನು ನೋಡಬೇಕು. ಈ ಬಗ್ಗೆ ಯಡಿಯೂರಪ್ಪ ಜೊತೆ ಸಹ ಚರ್ಚೆ ಮಾಡುತ್ತೇವೆ. ವಿಶ್ವನಾಥ್ ಜೆಡಿಎಸ್​ ಸೇರುವ ಮುನ್ನ ಏನು ಆಗಿರಲಿಲ್ಲ. ಈಗಾಲೂ ಅವರು ಹತಾಶೆ ಪಡಬೇಕಾಗಿಲ್ಲ. ಅವರ ಆರೋಗ್ಯ ತುಂಬಾ ಚೆನ್ನಾಗಿದೆ. ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದರು.

ಈ ಹಿಂದೆ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಸಹ ಸೋತಿದ್ದರು. ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕಾರಣದಿಂದ ಹೆಚ್.ವಿಶ್ವನಾಥ್ ಅವರಿಗೂ ನೀಡಬೇಕಿತ್ತು. ಜೊತೆಗೆ ಅಂದು ಎಲ್ಲಾ ಶಾಸಕರನ್ನು ಒಗ್ಗೂಡಿಸಿದ್ದು ವಿಶ್ವನಾಥ್ ಅವರೇ ಎಂಬುದು ನಮಗೆ ಗೊತ್ತಿದೆ ಎಂದು ಶ್ರೀನಿವಾಸ ಪ್ರಸಾದ್‌ ನೆನಪಿಸಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com