ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂದು ಸಾಬೀತು ಮಾಡಿದೆ: ಸಿದ್ದರಾಮಯ್ಯ ಕಿಡಿ

ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ದಾವಣಗೆರೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಬ್ ಕಾ ಸಾಥ್,ಸಬ್ ಕಾ ವಿಕಾಸ್ ಎಂಬುದು ಎಲ್ಲರಿಗೂ ಅನ್ವಯವಾಗುತ್ತದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದರ ಅರ್ಥ ಇದೇನಾ(?).ಒಂದು ಧರ್ಮ ಹೊರಗಿಡು ವುದು ಸಬ್ ಕಾ ಸಾಥ್ ಅಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದರು

ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಿಎಎ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನ್ನ ಹುಟ್ಟಿದ  ದಿನಾಂಕ ನನಗೆ ಗೊತ್ತಿಲ್ಲ, ಇನ್ನು ತಂದೆ-ತಾಯಿದು ಎಲ್ಲಿಂದ ತರಲಿ  ಎಂದು ಕೇಂದ್ರದ  ವಿರುದ್ದ ಆಕ್ರೋಶ  ವ್ಯಕ್ತಪಡಿಸಿದರು.

ನಾನು ಮನೆಯಲ್ಲೇ ಹುಟ್ಟಿದ್ದು , ಆಸ್ಪತ್ರೆಯಲ್ಲಿ ಹುಟ್ಟಿಲ್ಲ. ನನ್ನದೇ ಹುಟ್ಟಿದ ದಿನ ನನಗೆ ಗೊತ್ತಿಲ್ಲ. ಇನ್ನು ಅಪ್ಪ-ಅಮ್ಮನದು  ಹೇಗೆ ತಂದು ಕೊಡಲಿ. ಹೇಗೆ ಹೇಳಲಿ  ಅವರದ್ದು ಇಲ್ಲಾ ಅಂದ್ರೆ ನನ್ನನ್ನು ಡೌಟ್ಫುಲ್ ಅಂತ ಮಾಡುತ್ತೀರಾ ಎಂದು ಕೇಂದ್ರ ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com