'ಶಾದಿಭಾಗ್ಯ' ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ: ಜಾತ್ಯಾತೀತ ಎಂದರೇ ಎಲ್ಲವೂ ಅಲ್ಪಸಂಖ್ಯಾತರಿಗೆ ಸೇರಬೇಕೆ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಶಾದಿಭಾಗ್ಯ’ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರದ್ದುಪಡಿಸಿರುವುದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಶಾದಿಭಾಗ್ಯ’ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರದ್ದುಪಡಿಸಿರುವುದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಅವರು,  ಶಾದಿಭಾಗ್ಯ ರದ್ದು ಪಡಿಸಿರುವುದು ಉತ್ತಮ ಕೆಲಸ,  ನಾನು ಇದ್ನು ಸ್ವಾಗತಿಸುತ್ತೇನೆ,  ಭಾರತ ಜಾತ್ಯಾತೀತ ರಾಷ್ಟ್ರ, ಹೀಗಾಗಿ ಅಲ್ಪ ಸಂಖ್ಯಾತರ ಓಲೈಕೆ ಮಾಡುವುದರಲ್ಲಿ ಅರ್ಥವಿಲ್ಲ, ಭಾರತದ ಎಲ್ಲಾ ಜನರಿಗೂ  ಸರಿಸಮಾನದ ನಾಗರಿಕ ಸಂಹಿತೆ ತರಬೇಕು,  ಭಾರತದಲ್ಲಿರುವ ಹಿಂದೂಗಳಿಗೆ ಏನನನ್ನೂ ನೀಡಬಾರದೇ?  ಜಾತ್ಯಾತೀತ ಎಂದರೇ ಎಲ್ಲವನ್ನೂ ಅಲ್ಪ ಸಂಖ್ಯಾತರಿಗೆ ನೀಡುವುದು ಎಂದರ್ಥವೇ ಎಂದು ಪ್ರಶ್ನಿಸಿದ್ದಾರೆ.

ಪಾಕಿಸ್ತಾನ ಇಂಥಹ ಯೋಜನೆ ನೀಡುತ್ತಿದೆ, ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ. 

ಮುಸ್ಲಿಂ, ಕ್ರೈಸ್ತ, ಜೈನ್‌, ಸಿಖ್‌ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೇರಿದ ಯುವತಿಯರ ಮದುವೆಗೆ ₹50 ಸಾವಿರ ನೀಡುವ ಯೋಜನೆ ಇದಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com