ಇಷ್ಟ ಬಂದಂತೆ ಆದೇಶ ಮಾಡಿ, ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸಬಾರದು: ವಿಶ್ವನಾಥ್

ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸಬಾರದು, ಇಷ್ಟ ಬಂದಂತೆ ಆದೇಶ ಮಾಡಬಾರದು ಮಾಜಿ ಸಚಿವ ಎಚ್ ವಿಶ್ವನಾಥ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್
Updated on

ಮೈಸೂರು: ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸಬಾರದು, ಇಷ್ಟ ಬಂದಂತೆ ಆದೇಶ ಮಾಡಬಾರದು ಮಾಜಿ ಸಚಿವ ಎಚ್ ವಿಶ್ವನಾಥ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ದಿನದ 24 ಗಂಟೆ ದಿನಸಿ ಅಂಗಡಿ ತೆಗೆಯುವ ವಿಚಾರವಾಗಿ ಇಷ್ಟಬಂದಂತೆ ಆದೇಶ ಹೊರಡಿಸಬಾರದು. ಕರ್ಪ್ಯೂ ಮ್ಯಾನ್ಯುಯಲ್ ಪಾಲಿಸಬೇಕು. ಸಿಎಂ ಯಡಿಯೂರಪ್ಪ ಹೊರತುಪಡಿಸಿ ಯಾರು ಹೇಳಿಕೆಗಳನ್ನು ನೀಡಬಾರದು.

ಯಡಿಯೂರಪ್ಪ ವಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಾಲ ಕಾಲಕ್ಕೆ ಅವರಿಂದ ಸಲಹೆಗಳನ್ನು ಪಡೆಯಬೇಕು. ಇದು ಜಾಗತಿಕ‌ ಮಹಾಮಾರಿ. ಇದರ ವಿರುದ್ದ ಸಂಘಟಿತ ಹೋರಾಟ ಮಾಡಬೇಕು. ಸಚಿವರ ನಡುವೆ ಹೊಂದಾಣಿಕೆ ಕೊರತೆ ಆಗಬಾರದು. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com