ಅಸಮಾಧಾನವೇನಿದ್ದರೂ ಅಂತರಂಗದಲ್ಲಿರಲಿ: ಪ್ರತಾಪ್ ಸಿಂಹ- ರಾಮದಾಸ್ ಗೆ ವಿಶ್ವನಾಥ್ ಸಲಹೆ

 ಶಾಸಕ ರಾಮದಾಸ್ ಹಾಗೂ ಸಂಸದ ಪ್ರತಾಪ್​ ಸಿಂಹ ವಾಕ್ಸಮರ  ಬಹಿರಂಗವಾಗಿ ಬೇಡ ಅಂತರಂಗದಲ್ಲಿ ಇರಲಿ. ನಿಮ್ಮ ಅಸಮಾಧಾನ ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಇರಲಿ ಎಂದು ಮಾಜಿ ಸಚಿವ ಎಚ್ ವಿಶ್ವನಾಥ್ ಸಲಹೆ ನೀಡಿದ್ದಾರೆ.
ಎಚ್. ವಿಶ್ವನಾಥ್
ಎಚ್. ವಿಶ್ವನಾಥ್
Updated on

ಮೈಸೂರು: ಶಾಸಕ ರಾಮದಾಸ್ ಹಾಗೂ ಸಂಸದ ಪ್ರತಾಪ್​ ಸಿಂಹ ವಾಕ್ಸಮರ  ಬಹಿರಂಗವಾಗಿ ಬೇಡ ಅಂತರಂಗದಲ್ಲಿ ಇರಲಿ. ನಿಮ್ಮ ಅಸಮಾಧಾನ ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಇರಲಿ ಎಂದು ಮಾಜಿ ಸಚಿವ ಎಚ್ ವಿಶ್ವನಾಥ್ ಸಲಹೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು , ಪಕ್ಷದಲ್ಲಿ ರಾಮದಾಸ್ ಹಿರಿಯರಿದ್ದಾರೆ. ಜಿಲ್ಲಾ ಮಂತ್ರಿಗಳು ಇದ್ದಾರೆ. ಎಲ್ಲರ ಬಳಿ ಚರ್ಚಿಸಿ ನಿಮ್ಮ ಸಮಸ್ಯೆ ಬಗಹರಿಸಿಕೊಳ್ಳಿ. ಸುಮ್ಮನೆ ಬಹಿರಂಗವಾಗಿ ವಾಕ್ಸಮರ ಬೇಡ ಎಂದು  ಹೆಚ್​.ವಿಶ್ವನಾಥ್ ಅವರು ಇಬ್ಬರಿಗೂ ಸಲಹೆ ನೀಡಿದ್ದಾರೆ.

ಇಡೀ ಭಾರತ ಮೋದಿ ಘೋಷಣೆಯನ್ನು ಸ್ವಾಗತಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಜನರ ಮೇಲೆ ಮೋದಿ ಒಲವು ಇದೆ. ಈ ಒಲವು ನೋಡಿದ್ರೆ ಈ ಪ್ಯಾಕೇಜ್ ಅನುಷ್ಠಾನ ಆಗುತ್ತೆ ಅನ್ನೋದೆ ನಂಬಿಕೆ ಇದೆ.  ಥಿಂಕ್ ಗ್ಲೋಬಲಿ ಅನ್ನೋ ಆಶಯಕ್ಕೂ ಮೋದಿ ನಿರೇರೆದಿದ್ದಾರೆ. ಸ್ಥಳಿಯ ವಾಣಿಜ್ಯ ಚಟುವಟಿಕೆಗೆ ಗ್ಲೋಬಲ್ ಮಾರ್ಕೆಟ್ ಆರಂಭವಾಗಬೇಕಿದೆ. ಈ ವಿಶೇಷ
ಪ್ಯಾಕೇಜ್​ಅನ್ನು  ಎಲ್ಲರಿಗೂ ಅನುಕೂಲ ಆಗುವ ನಿರೀಕ್ಷೆ ಇದೆ ಎಂದು ಅವರು ಮೋದಿ ವಿಶೇಷ ಪ್ಯಾಕೇಜ್​ ಬಗ್ಗೆ ಮಾತನಾಡಿದರು.

ಸದ್ಯ ರಾಜ್ಯದಲ್ಲಿ ಆರ್ಥಿಕ ಶಿಸ್ತು ರೂಪಿಸಬೇಕಿದೆ. ಈ ಹಿನ್ನಲೆಯಲ್ಲಿ ಅಗತ್ಯವಿರುವುದಕ್ಕೆ ಮಾತ್ರ ಖರ್ಚು ಮಾಡಿ. ನಮ್ಮ ಬಜೆಟ್ ಹಣದಲ್ಲಿ ರಾಜ್ಯದ ಸರ್ಕಾರಿ ನೌಕರರ ಸಂಬಳಕ್ಕೆ ಶೇ. 21ರಷ್ಟು ಹೋಗುತ್ತಿದೆ. ರಾಜ್ಯದ ಪಿಂಚಣಿದಾರರಿಗೆ ಶೇ. 9ರಷ್ಟು ಹಣ ಹೋಗುತ್ತದೆ. ಇದನ್ನೆಲ್ಲ ನಿಯಂತ್ರಣ ಮಾಡಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com