ಉಪಚುನಾವಣೆ ಮೂರು ಪಕ್ಷಗಳ ದಿಗ್ಗಜರಿಗೆ ಸತ್ವ ಪರೀಕ್ಷೆ: ಫಲಿತಾಂಶದ ಸ್ಪಷ್ಟ ಸಂದೇಶವೇನು?

ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ಆರಂಭವಾಗಿದ್ದು, ಕಳೆದ 2 ವಾರಗಳಿಂದ 2 ಕ್ಷೇತ್ರಗಳಲ್ಲಿ ಪ್ರಮುಖ ರಾಜಕೀಯ ನಾಯಕರು ಪ್ರಚಾರದಲ್ಲಿ ಭಾಗವಹಿಸಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ಆರಂಭವಾಗಿದ್ದು, ಕಳೆದ 2 ವಾರಗಳಿಂದ 2 ಕ್ಷೇತ್ರಗಳಲ್ಲಿ ಪ್ರಮುಖ ರಾಜಕೀಯ ನಾಯಕರು ಪ್ರಚಾರದಲ್ಲಿ ಭಾಗವಹಿಸಿದ್ದರು.

ಆರ್ ಆರ್ ನಗರ ಮತ್ತು ಶಿರಾ ಉಪ ಚುನಾವಣೆ ಫಲಿತಾಂಶ ಸರ್ಕಾರಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ, ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ನ ಪ್ರಮುಖ ನಾಯಕರು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ, ಸಿಎಂ ಯಡಿಯೂರಪ್ಪ, ಮಾಜಿ ಪಿಎಂ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಸೇರಿದಂತೆ ಹಲವು ಪ್ರಮುಖ ನಾಯಕರು  ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಅಭ್ಯರ್ಥಿಗಳ ಬೆಂಬಲಿರು ಮತದಾನದ ಮುನ್ನದಿನವಾದ ಸೋಮವಾರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು.

ಕೊರೋನಾ ಮುಂಜಾಗ್ರತೆಯೊಂದಿಗೆ ಬೆಳ್ಗೆ 7ರಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ,  ಎರಡು ಕ್ಷೇತ್ರಗಳಿಂದ, ಒಟ್ಟು 1,008 ಬೂತ್ ಗಳನ್ನು ಸ್ಥಾಪಿಸಲಾಗಿದ್ದು, ಥರ್ಮಲ್ ಸ್ಕ್ಯಾನರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ, ಕೊರೋನಾ ಪಾಸಿಟಿವ್ ಇದ್ದವರು ಕೂಡ ಮತ ಚಲಾಯಿಸಬಹುದಾಗಿದೆ.  

31 ಅಭ್ಯರ್ಥಿಗಳು; ಸಿರಾದಲ್ಲಿ 15 ಮತ್ತು ಆರ್.ಆರ್.ನಗರದಲ್ಲಿ 16 ಮಂದಿ ಕಣದಲ್ಲಿದ್ದಾರೆ ಮತ್ತು 6.77 ಲಕ್ಷ ಮತದಾರರು ತಮ್ಮ ಮತದಾನದ ಹಕ್ಕು ಪಡೆಯಲು ಅರ್ಹರಾಗಿದ್ದಾರೆ. ಚುನಾವಣಾ ಆಯೋಗವು ಉತ್ತಮ ಮತದಾನದ ಬಗ್ಗೆ ವಿಶ್ವಾಸ ಹೊಂದಿದೆ, ಆದರೆ ವಿಶ್ಲೇಷಕರು ಸಂಶಯ ವ್ಯಕ್ತಪಡಿಸಿದ್ದಾರೆ. 2018 ರ ಚುನಾವಣೆಯಲ್ಲಿ ಆರ್‌ಆರ್ ನಗರದಲ್ಲಿ ಶೇ 56 ರಷ್ಟು ಮತದಾನವಾಗಿದ್ದರೆ, ಶಿರಾ ಶೇ 84 ರಷ್ಟು ಮತದಾನವಾಗಿತ್ತು.

ಯಡಿಯೂರಪ್ಪ ಇತ್ತೀಚೆಗೆ ಬಿಜೆಪಿ ಎರಡೂ ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ಮುನಿರತ್ನ ಅವರನ್ನು ಸಚಿವರನ್ನಾಗಿ ಮಾಡುವುದಾಗಿ ಘೋಷಿಸಿದ್ದರು. ಆರ್.ಆರ್.ನಗರದಲ್ಲಿ, ಬಿಜೆಪಿ ಮುನಿರತ್ನ ಅವರ ಸ್ವಂತ ಬೆಂಬಲ ನೆಲೆಯನ್ನು ಮತ್ತು ಬಿಜೆಪಿ ಬೆಂಬಲಿಗರನ್ನು ಅವಲಂಬಿಸಿದೆ, ಆದರೆ ಶಿರಾದಲ್ಲಿ ಅದು ಹೆಜ್ಜೆ ಇಡಲು ಪ್ರಯತ್ನಿಸುತ್ತಿದೆ.

ಈ ಚುನಾವಣೆ ಮೂರು ಪಕ್ಷಗಳ ನಾಯಕರಿಗೆ ಸತ್ವ ಪರೀಕ್ಷೆಯಾಗಿದೆ, ಸಿಎಂ ಯಡಿಯೂರಪ್ಪ ಅವರಿಗೆ ತಮ್ಮ ನಾಯಕತ್ವವನ್ನು ಪುನಃ ಸ್ಥಾಪಿಸಲು ನೋಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದಾಳತ್ವದಲ್ಲಿ ತಮ್ಮ ಗೆಲುವು ಕಂಡುಕೊಳ್ಳಲಿದ್ದಾರೆ. ಇನ್ನೂ ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳಲ್ಲಿ ತಮ್ಮ ಸ್ಥಾನ ಭದ್ರ ಎಂಬುದು ಜೆಡಿಎಸ್ ಗೆ ಸ್ಷಷ್ಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com