ಬೆಂಗಳೂರು: ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ನೀರಿನ ಶುಲ್ಕ ಹೆಚ್ಚಳ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕ ಏರಿಕೆ ಮಾಡುವ ಮೂಲಕ ರಾಜ್ಯ ಬಿಎಸ್ ಯಡಿಯೂರಪ್ಪ ಸರ್ಕಾರ ಜನರಿಗೆ ಡಬಲ್ ಶಾಕ್ ನೀಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು. ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ನೀರಿನ ಶುಲ್ಕ ಹೆಚ್ಚಳ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ. ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕ ಏರಿಕೆ ಮಾಡುವ ಮೂಲಕ ರಾಜ್ಯ ಬಿಎಸ್ ಯಡಿಯೂರಪ್ಪ ಸರ್ಕಾರ ಜನರಿಗೆ ಡಬಲ್ ಶಾಕ್ ನೀಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು.ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement