ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಜನಾದೇಶಕ್ಕೆ ತಲೆ ಬಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳ ಚುನಾವಣ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಉಪ ಚುನಾವಣೆ ನಡೆದ ಆರ್.ಆರ್. ನಗರ ಮತ್ತು ಶಿರಾ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಿನ್ನಡೆಯಲ್ಲಿದೆ. ‘ಮತ ಎಣಿಕೆ ಮುಗಿಯಲು ಇನ್ನೂ ಒಂದೂವರೆಗೆ ಗಂಟೆ ಇದೆ. ಫಲಿತಾಂಶದಲ್ಲಿ ಏನು ಬೇಕಾದರೂ ಆಗುವುದು. ನೋಡೋಣ’ ಎಂದರು.
Advertisement