ಸಂಪುಟ ಕಸರತ್ತು: ಮುಂದಿನ ವಾರ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ದೆಹಲಿಗೆ ಭೇಟಿ

ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಡಿ ನಡ್ಡಾ ಹಾಗೂ ಪಕ್ಷದ ಕೇಂದ್ರೀಯ ನಾಯಕರೊಂದಿಗೆ ಚರ್ಚೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Updated on

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಡಿ ನಡ್ಡಾ ಹಾಗೂ ಪಕ್ಷದ ಕೇಂದ್ರೀಯ ನಾಯಕರೊಂದಿಗೆ ಚರ್ಚೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. 

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದರಲ್ಲಿ ಕೇಂದ್ರ ನಾಯಕರು ಬಿಝಿಯಾಗಿದ್ದು, ಕೇಂದ್ರೀಯ ನಾಯಕರು ಯಾವಾಗ ಭೇಟಿಗೆ ದಿನಾಂಕ ನೀಡಲಿದ್ದಾರೆಂದು ಯಡಿಯೂರಪ್ಪ ಅವರು ಕಾದು ಕುಳಿತಿದ್ದಾರೆಂದು ತಿಳಿದುಬಂದಿದೆ. 

ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ 34 ಮಂದಿಯ ಬಲವಿದೆ. ಇನ್ನೂ 7 ಸ್ಥಾನಗಳು ಖಾಲಿ ಉಳಿದಿವೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಹಾಯ ಮಾಡಿದ್ದ ಎಂಎಲ್ಸಿಗಳಾದ ಎಂಟಿಬಿ ನಾಗರಾಜ್, ಹೆಚ್ ವಿಶ್ವನಾಥ್ ಹಾಗೂ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದ್ದು, ಇವರೊಂದಿಗೆ ಮುನಿರತ್ನ ಅವರಿಗೂ ಸ್ಥಾನ ನೀಡಲು ಮುಂದಾಗಿದ್ದಾರೆಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. 

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಂಎಲ್ಸಿಗಳಾದ ಎಂ ಟಿಬಿ ನಾಗರಾಜ್, ಎಚ್ ವಿಶ್ವನಾಥ್ ಮತ್ತು ಆರ್ ಶಂಕರ್, ರಾಜ್ಯದಲ್ಲಿ ಪಕ್ಷವನ್ನು ರಚಿಸಲು ಸರ್ಕಾರಕ್ಕೆ ಸಹಾಯ ಮಾಡಿದ ಟರ್ನ್ ಕೋಟ್ಗಳಿಗೆ ಅವಕಾಶ ಕಲ್ಪಿಸಬೇಕಾಗಿದೆ. ಅವರೊಂದಿಗೆ, ಆರ್.ಆರ್.ನಗರ ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಸಿಎಂ ಅವರು ಬಂಡಾಯ ತಂಡದ ಭಾಗವಾಗಿದ್ದ ಮುನಿರತ್ನ ಅವರನ್ನು ಸೇರಿಸಬೇಕಾಗಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com