ಸಂಪುಟ ಕಸರತ್ತು: ಇಂದು ದೆಹಲಿಗೆ ಸಿಎಂ ಯಡಿಯೂರಪ್ಪ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡು ಬರುತ್ತಿದೆ. ಈ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡು ಬರುತ್ತಿದೆ. ಈ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ. 

ಮೂಲಗಳ ಪ್ರಕಾರ ಹೈಕಮಾಂಡ್ ಜೊತೆಗೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚಿಸುವ ಉದ್ದೇಶದೊಂದಿಗೆ ಯಡಿಯೂರಪ್ಪ ಅವರು ದೆಹಲಿಗೆ ತೆರಳುತ್ತಿದ್ದಾರೆಂದು ಹೇಳಲಾಗುತ್ತಿದ್ದು, ಬುಧವಾರ ರಾತ್ರಿಯೇ ನಗರಕ್ಕೆ ವಾಪಸ್ಸಾಗಲಿದ್ದಾರೆಂದು ಮೂಲಗಳು ತಿಳಿಸಿವೆ. 

ಇಂದು ಬೆಳಿಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಸಿಎಂ ಯಡಿಯೂರಪ್ಪ ಅವರು 11.30ಕ್ಕೆ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ. 

ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com