ಬಿಜೆಪಿ ಸರ್ಕಾರ ರಚಿಸಲು ಯೋಗೇಶ್ವರ್ ಕೂಡ ಕಾರಣ, ಅವರಿಗೂ ಸಚಿವ ಸ್ಥಾನ ಸಿಗಬೇಕು: ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಿಪಿ ಯೋಗೇಶ್ವರ್ ಕಾರಣರಾಗಿದ್ದು, ಅವರು ಹಲವು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸಿ.ಪಿ ಯೋಗೇಶ್ವರ್
ಸಿ.ಪಿ ಯೋಗೇಶ್ವರ್
Updated on

ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಿಪಿ ಯೋಗೇಶ್ವರ್ ಕಾರಣರಾಗಿದ್ದು, ಅವರು ಹಲವು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಉಡುಪಿಯಲ್ಲಿ  ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಹಳ ಜಟಿಲ ವಿಚಾರವಾಗಿದ್ದು, ವರಿಷ್ಠರು ಹಾಗೂ ಮುಖ್ಯಮಂತ್ರಿ ಸಮಾಲೋಚಿಸಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ಯೋಗೀಶ್ವರ್‌ಗೆ ಹಿಂದೆ ಜವಾಬ್ದಾರಿ ಹೊತ್ತು‌ ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬದು ವೈಯಕ್ತಿಕ ಅಭಿಪ್ರಾಯ ಎಂದರು. 

ಪಕ್ಷದಲ್ಲಿ ಮೂಲ ಬಿಜೆಪಿಗರು, ವಲಸಿಗರು ಎಂಬ ತಾರತಮ್ಯ ಇಲ್ಲ. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣರಾಗಿದ್ದು, ಕುಟುಂಬದ ರೀತಿ‌ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ‌. ಯಾರಿಗೆ ಏನು ಸಲ್ಲಬೇಕು, ಅದು ಪಕ್ಷದಿಂದ ಸಿಗಲಿದೆ ಎಂದರು. ಇನ್ನೂ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಸಮತೋಲನ ಇರುವುದಿಲ್ಲ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com