ಸಂತೋಷ್ ಆತ್ಮಹತ್ಯೆ ಯತ್ನಕ್ಕೆ 'ಪರ್ಸನಲ್ ವಿಡಿಯೋ' ಕಾರಣ: ಡಿ.ಕೆ. ಶಿವಕುಮಾರ್

ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Updated on

ಕಾರವಾರ; ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಅವರು ಯಾರದ್ದೋ ವೈಯಕ್ತಿಕ ವಿಡಿಯೋವೊಂದನ್ನು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಸಚಿವರಿಗೆ ಕೊಟ್ಟಿದ್ದ ಮಾಹಿತಿ 2-3 ತಿಂಗಳ ಹಿಂದೆ ಬಂದಿತ್ತು. ಇದನ್ನು ಮುಂದಿಟ್ಟುಕೊಂಡು ವಿಧಾನಪರಿಷತ್ ಸದಸ್ಯರು, ಸಚಿವರಿಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್ ಇಬ್ಬರಿಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಕೇಳಿದ್ದೆ. ಅದರ ಸತ್ಯಾಂಶಗಳೇನೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. 

ವಿಡಿಯೋದಲ್ಲಿ ಗುಪ್ತ ಮಾಹಿತಿಯೇನೋ ಅಡಗಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸುವುದು ಸಾಮಾನ್ಯ ವಿಚಾರವಲ್ಲ. ಹಾಗಾಗಿ ಈ ಕುರಿತು ತನಿಖೆಯಾಗಬೇಕಿದೆ. ಸತ್ಯಾಂಶ ಏನಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಆದರೆ, ಈ ತನಿಖೆಯು ರಾಜ್ಯ ಸರ್ಕಾರದಿಂದ ಆಗಬಾರದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com