ಬಯಸಿದ್ದ ಖಾತೆ ಸಿಕ್ಕರೂ ಶ್ರೀರಾಮುಲು ಅಸಮಾಧಾನ!

ರಾಜ್ಯ ಸಚಿವ ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಧಾನಗೊಂಡಿದ್ದಾರೆಂದು ತಿಳಿದುಬಂದಿದೆ. 
ಖಾತೆ ಬದಲಾದ ಹಿನ್ನೆಲೆಯಲ್ಲಿ ಕಚೇರಿಯ ಬೋರ್ಡ್ ಗಳನ್ನು ಬದಲಿಸುತ್ತಿರುವ ವಿಧಾನಸೌಧ ಸಿಬ್ಬಂದಿಗಳು
ಖಾತೆ ಬದಲಾದ ಹಿನ್ನೆಲೆಯಲ್ಲಿ ಕಚೇರಿಯ ಬೋರ್ಡ್ ಗಳನ್ನು ಬದಲಿಸುತ್ತಿರುವ ವಿಧಾನಸೌಧ ಸಿಬ್ಬಂದಿಗಳು
Updated on

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಧಾನಗೊಂಡಿದ್ದಾರೆಂದು ತಿಳಿದುಬಂದಿದೆ. 

ಸಚಿವ ಸಂಪುಟ ಪುನರ್​ ವಿಸ್ತರಣೆಗೂ ಮುನ್ನವೇ ಸಿಎಂ ಯಡಿಯೂರಪ್ಪ ಅವರು ಶ್ರೀರಾಮುಲು ಬಳಿ ಇದ್ದ ಆರೋಗ್ಯ ಖಾತೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯನ್ನು ವಾಪಸ್​ ಪಡೆದಿದ್ದು, ಈ ಎರಡೂ ಖಾತೆಯ ಬದಲಿಗೆ ಡಿಸಿಎಂ ಗೋವಿಂದ ಕಾರಜೋಳ ಅವರ ಬಳಿಯಿದ್ದ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿಯನ್ನು ಶ್ರೀರಾಮುಲುಗೆ ಕೊಟ್ಟಿದ್ದಾರೆ. ಬಯಸಿದ್ದ ಸಚಿವಾಲಯವನ್ನೇ ನೀಡಿದ್ದರೂ ಕೂಡ ಶ್ರೀರಾಮುಲು ಅವರು ಅಸಮಾಧಾನಗೊಂಡಿದ್ದಾರೆ. 

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡು ಬಿಎಸ್ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಂಪುಟ ರಚನೆ ವೇಳೆ ಶ್ರೀರಾಮುಲು ಅವರಿಗೆ ಆರೋಗ್ಯ ಇಲಾಖೆ ಖಾತೆ ನೀಡಲಾಗಿತ್ತು. ಆದರೆ, ಇದಕ್ಕೆ ಬೇಸರಗೊಂಡಿದ್ದ ಶ್ರೀರಾಮುಲು ಅವರು, ಆರೋಗ್ಯ ಖಾತೆ ಬದಲು ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡಿ ಎಂದು ಬಿಎಸ್‌ವೈಗೆ ಮನವಿ ಮಾಡಿದ್ದರು. 

ಇದೀಗ ಅದೇ ಖಾತೆಯನ್ನೇ ನೀಡಿದ್ದರೂ ಶ್ರೀರಾಮುಲು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕೊರೋನಾದಂತಗ ಸಂದಿಗ್ಧ ಸಮಯದಲ್ಲಿ, ಅದರಲ್ಲೂ ಸಂಪುಟ ವಿಸ್ತರಣೆಗೂ ಮುನ್ನವೇ ಆರೋಗ್ಯ ಖಾತೆ ಕಿತ್ತುಕೊಂಡಿರುವುದಕ್ಕೆ ಅಸಮಾಧಾನಗೊಂಡಿರುವ ಶ್ರೀರಾಮುಲು ಅವರು, ಇಂತಹ ನಿರ್ಧಾರಗಳು ತಾವು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಸಂದೇಶವನ್ನು ಜನರಿಗೆ ನೀಡಲಿದೆ, ಇದು ತನ್ನ ಪಾಲಿಗೆ ಕಳಂಕ ಎಂದು ಆಪ್ತ ಬಳಿ ಬೇಸರ ವ್ಯಕ್ತಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಕೊರೋನಾ ನಿಧಾನವಾಗಿ ವ್ಯಾಪಿಸುತ್ತಿದ್ದ ವೇಳೆಯಲ್ಲೇ ಶ್ರೀರಾಮುಲು ಆರೋಗ್ಯ ಖಾತೆಯನ್ನು ಹೊಂದಿದ್ರೂ ವೈದ್ಯಕೂ ಶಿಕ್ಷಣ ಖಾತೆಯ ಡಾ.ಕೆ.ಸುಧಾಕರ್ ಅವರಿಗೆ ಬೆಂಗಲೂರಿನ ಕೋವಿಡ್ ನಿರ್ವಹಣೆ ಜವಾಬ್ದಾರಿ ನೀಡಿ ತಮ್ಮನ್ನು ರಾಜ್ಯದ ಇತರ ಭಾಗಗಳಿಗೆ ಮಾತ್ರ ಸೀಮಿತಗೊಳಿಸಿದ್ದು ಅವರಿಗೆ ಬೇಸರವನ್ನುಂಟು ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಇಡೀ ಖಾತೆಯನ್ನೇ ಕಿತ್ತುಕೊಂಡು ಸುಧಾಕರ್ ಅವರಿಗೆ ನೀಡಿದ್ದರಿಂದ ತಮ್ಮ ಪ್ರತಿಷ್ಠೆಗೆ ಧಕ್ಕೆ ಬಂದಂತಾಗಿದೆ ಎಂದು ಶ್ರೀರಾಮುಲು ಆಪ್ತರ ಬಳಿ ಕೊಂಡಿದ್ದಾರೆಂದು ತಿಳಿದುಬಂದಿದೆ. 

ಶ್ರೀರಾಮುಲು ಅವರ ಖಾತೆ ಬದಲಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏಕಮುಖ ತೀರ್ಮಾನ ಕೈಗೊಂಡಿಲ್ಲ ಹೇಳಲಾಗುತ್ತಿದೆ. ಖಾತೆ ಬದಲಾವಣೆ ಕುರಿತು ಹೈಕಮಾಂಡ್ ಗಮನಕ್ಕೆ ತರಲಾಗಿದ್ದು, ಕಳೆದೊಂದು ವಾರದಿಂದ ಶ್ರೀರಾಮುಲು ಖಾತೆ ಬದಲಾವಣೆ ಬಗ್ಗೆ ಹೈಕಮಾಂಡ್ ಪ್ರತಿನಿಧಿ ಜೊತೆ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. 

ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಒಬ್ಬರಿಗೆ ನೀಡೋಣ. ಇನ್ನು ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಒಬ್ಬರ ಬಳಿ ಇರಲಿ ಎಂದು ಯಡಿಯೂರಪ್ಪ ಅವರು ಹೈಕಮಾಂಡ್ ಪ್ರತಿನಿಧಿ ಬಳಿ ಚರ್ಚೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೇ, ಖಾತೆ ಬದಲಾವಣೆ ಬಗ್ಗೆ ರಾಮುಲು ಗಮನಕ್ಕೂ ಇತ್ತು.  ಕಾರಜೋಳ ಜೊತೆಯೂ ಸಿಎಂ ಚರ್ಚೆ ಮಾಡಿದ್ದರು ಎನ್ನಲಾಗಿದೆ.

ವರಿಷ್ಠರನ್ನು ಭೇಟಿ ಮಾಡಿ ದೂರು ನೀಡಲಿರುವ ಶ್ರೀರಾಮುಲು
ಹೇಳದೇ ಕೇಳದೇ ಏಕಾಏಕಿ ಆರೋಗ್ಯ ಖಾತೆಯಿಂದ ತಮ್ಮನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿರುವ ಸಚಿವ ಶ್ರೀರಾಮುಲು ಬಿಜೆಪಿ ವರಿಷ್ಠರಿಗೆ ದೂರು ಕೊಡಲು ನಿರ್ಧರಿಸಿದ್ದಾರೆ.

ಮಂತ್ರಿಸ್ಥಾನ ನನಗೆ ಸಾಕಾಗಿ ಹೋಗಿದೆ ಎಂದು ಆಪ್ತರ ಬಳಿ ಅಳಲು ತೋಡಿಕೊಂಡಿರುವ ತೋಡಿಕೊಂಡಿರುವ ಶ್ರೀರಾಮುಲು ನನಗೇ ಯಾವುದೇ ಸಚಿವ ಹುದ್ದೆ ಬೇಡ.ಸಂಪುಟದಿಂದ ಹೊರಗೆ ಬರಲು ಸಜ್ಜಾಗಿದ್ದಾನೆ ಎಂದು ಹೇಳಿಕೊಂಡಿದ್ದಾರೆ,

ದೇವನಹಳ್ಳಿಯ ಚಿಕ್ಕಜಾಲ ಬಳಿ ಇರುವ ತಮ್ಮ ಆಪ್ತರ ಜತೆ ಸಮಾಲೋಚನೆ ನಡೆಸಿದ ಶ್ರೀರಾಮುಲು, ವರಿಷ್ಠರನ್ನು ಭೇಟಿ ಮಾಡಿದ ಬಳಿಕ ತಮ್ಮ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com