ತುಮಕೂರು: ಶಿರಾ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಮಾಜಿ ಸಚಿವ ಎಚ್.ಡಿ ರೇವಣ್ಣ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಮಾಜಿ ಸಚಿವ ದಿವಂಗತ ಬಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು ಬುಧವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಎಚ್.ಡಿ ರೇವಣ್ಣ ನಾಮಪತ್ರ ಸಲ್ಲಿಕೆಗೆ ಮೂಹೂರ್ತ ಫಿಕ್ಸ್ ಮಾಡಿದ್ದು ಮಧ್ಯಾಹ್ನ1.52 ಕ್ಕೆ ಪುತ್ರ ಹಾಗೂ ಸಂಸದ ಪ್ರಜ್ವಲ್ ಅವರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಮಾಜಿ ಸಚಿವರುಗಳಾದ ಬಂಡೆಪ್ಪ ಕಾಶೆಂಪೂರ್, ಬಸವರಾಜ ಹೊರಟ್ಟಿ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆಯುವ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
Advertisement