ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ಕಷ್ಟದ ದಿನಗಳು ಕಾದಿವೆ- ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

 ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಜಾಲಹಳ್ಳಿ, ಪೀಣ್ಯ ಮತ್ತಿತರ ವಾರ್ಡ್ ನಲ್ಲಿ ಇಂದು ರೋಡ್‌ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚನೆ ಮಾಡಿ ಮಾತನಾಡಿದ ಅವರು, ಪೊಲೀಸರು ಒಂದು ಪಕ್ಷದ ಪರ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದರು. 

ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ. ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com