ಡ್ರಗ್ ಕೇಸ್ ನಲ್ಲಿ ಸಾಕ್ಷ್ಯ ಸಿಕ್ಕರೆ ಜಮೀರ್ ನನ್ನು ಗಲ್ಲಿಗೇರಿಸಿ: ಸಿದ್ದರಾಮಯ್ಯ

ಡ್ರಗ್ಸ್ ಜಾಲದಲ್ಲಿ ದೊಡ್ಡವರು, ಸಣ್ಣವರು ಎನ್ನದೇ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಹುಬ್ಬಳ್ಳಿ: ಡ್ರಗ್ಸ್ ಜಾಲದಲ್ಲಿ ದೊಡ್ಡವರು, ಸಣ್ಣವರು ಎನ್ನದೇ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಜಾಲದಲ್ಲಿ ಜಮೀರ್ ಅಹ್ಮದ್ ಅವರ ವಿರುದ್ಧ ಸಾಕ್ಷ್ಯ ಇದ್ದರೆ ಗಲ್ಲಿಗೇರಿಸಿ ಎಂದು ಅವರೇ ಹೇಳಿದ್ದಾರೆ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ತಿಳಿಸಿದ್ದಾರೆ. ಸಂಬರಗಿ ಹೇಳಿದ ಮಾತ್ರಕ್ಕೆ ತನಿಖೆ ಮಾಡೋದಲ್ಲ ರಾಜಕೀಯವಾಗಿ ಮುಗಿಸಲು ಯಾರೂ ಯಾರ ಮೇಲೆಯೂ ಆರೋಪ ಮಾಡಬಾರದು ಎಂದು ಹೇಳಿದರು.

ಜಮೀರ್ ಅಹಮದ್ ಅವರನ್ನು ಸಮರ್ಥಿಸಿಕೊಳ್ಳಲು ಹೋಗಿ ಸಿದ್ದರಾಮಯ್ಯ ಅವರು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದು ಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com