ನರೇಂದ್ರ ಮೋದಿಯವರ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ: ಸಿದ್ದರಾಮಯ್ಯ

 ಅಖಿಲ ಭಾರತ ಕೈಮಗ್ಗ‌ ಮಂಡಳಿಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಅಖಿಲ ಭಾರತ ಕೈಮಗ್ಗ‌ ಮಂಡಳಿಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಖಿಲ ಭಾರತ ಕೈಮಗ್ಗ‌ ಮಂಡಳಿಯನ್ನು ರದ್ದುಪಡಿಸುವ ಮೂಲಕ‌ ನರೇಂದ್ರ ಮೋದಿ ಅವರ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ.‌ ನೀತಿ ನಿರೂಪಣೆ,‌‌ ಕಾರ್ಯಕ್ರಮಗಳ ಮೇಲುಸ್ತುವಾರಿ‌‌ ಮತ್ತು‌ ಕುಂದುಕೊರತೆಗಳ ನಿವಾರಣೆಯ‌ ಕೆಲಸ ಮಾಡುತ್ತಾ, ಕೇಂದ್ರ ಸರ್ಕಾರ ಮತ್ತು ನೇಕಾರರ ನಡುವೆ ಕೊಂಡಿಯಂತಿದ್ದ ಮಂಡಳಿ ರದ್ದತಿ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಜುಲೈ 27ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿ, ಕೈಮಗ್ಗ ಮಂಡಳಿಯನ್ನು ರದ್ದುಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com