ಕಾಂಗ್ರೆಸ್ ನಿಂದ ಹಣ ಪಡೆದದ್ದನ್ನು ಸಿದ್ದರಾಮಯ್ಯ ಸಾಬೀತು ಪಡಿಸಲಿ: ಜಿ.ಟಿ. ದೇವೇಗೌಡ ಸವಾಲು

ಕಳೆದ 25 ವರ್ಷಗಳಿಂದ ನಾನು ಏನು ಎಂಬ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ, ಕಾಮಗಾರಿ ಸೇರಿದಂತೆ ಯಾವುದೇ ರೂಪದಲ್ಲಿ ನಾನು ದುಡ್ಡು ಪಡೆದಿದ್ದೇನೆ ಎಂದು ಸಾಬೀತು ಮಾಡಲಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಜಿಟಿ ದೇವೇಗೌಡ ಸವಾಲು​ ಹಾಕಿದ್ದಾರೆ. 
ಜಿ.ಟಿ ದೇವೇಗೌಡ
ಜಿ.ಟಿ ದೇವೇಗೌಡ

ಮೈಸೂರು:  ಕಳೆದ 25 ವರ್ಷಗಳಿಂದ ನಾನು ಏನು ಎಂಬ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ, ಕಾಮಗಾರಿ ಸೇರಿದಂತೆ ಯಾವುದೇ ರೂಪದಲ್ಲಿ ನಾನು ದುಡ್ಡು ಪಡೆದಿದ್ದೇನೆ ಎಂದು ಸಾಬೀತು ಮಾಡಲಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಜಿಟಿ ದೇವೇಗೌಡ ಸವಾಲು​ ಹಾಕಿದ್ದಾರೆ. 

ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿ.ಟಿ.ಡಿ ಹಣ ಪಡೆದಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೆ.  ಇಬ್ಬರು ಒಂದೆ ಸಭಾಂಗಣದಲ್ಲಿ ಕುಳಿತು ಸಭೆ ಮಾಡಿದ್ದೇವು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವಂತೆ ಹೇಳಿದ್ದರು. ಅದಕ್ಕೆ ಒಪ್ಪಿಗೆಯನ್ನು ಸೂಚಿಸಿದ್ದೆ. ಆಗ ಬೂತ್ ಖರ್ಚು ವ್ಯವಸ್ಥೆಗಾಗಿ ಹಣ ನೀಡಲು ಯಾರಿಗೆ ಜವಬ್ದಾರಿ ನೀಡಬೇಕು ಎಂದು ಕೇಳಿದಾಗ, ಯತೀಂದ್ರ ಸಿದ್ದರಾಮಯ್ಯ  ಹಾಗೂ ಜೆಡಿಎಸ್‌ ಪಕ್ಷದ ರಾಜು ಅವರಿಗೆ ನೀಡುವಂತೆ ತೀರ್ಮಾನ ಆಯಿತು. 

ಬೂತ್ ಖರ್ಚು ವ್ಯವಸ್ಥೆಗಾಗಿ ಯತೀಂದ್ರ ಹಾಗೂ ನಮ್ಮ ಪಕ್ಷದ ಜಿಲ್ಲಾಧ್ಯಕ್ಷ ರಾಜು ಹಣ ವಿತರಣೆ ಮಾಡಿದ್ದರು. ಚುನಾವಣೆಯಲ್ಲಿ ನಾನು ಹಣಕಾಸಿನ ವ್ಯವಹಾರ ಮಾಡಿಲ್ಲ. ನಾನು ವೈಯಕ್ತಿಕವಾಗಿ ಹಣ ನೀಡಿಲ್ಲ. ಅವರು ಸಹ ನನಗೆ ಹಣ ನೀಡಿಲ್ಲ" ಎಂದು ಸ್ಪಷ್ಟನೆ ನೀಡಿದರು. "ಆತ್ಮಸಾಕ್ಷಿಯಾಗಿ ನಾನು ಇದನ್ನು ಹೇಳುತ್ತಿದ್ದೇನೆ. ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ವಿವರಣೆ ನೀಡಬೇಕು" ಎಂದು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com