ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅಗತ್ಯ ಸಂದೇಶ ನೀಡಲಾಗಿದೆ: ಡಿಕೆ ಶಿವಕುಮಾರ್

ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಪಕ್ಷದ ಕಾರ್ಯಕರ್ತರಿಗೆ ಅಗತ್ಯ ಸಂದೇಶ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಪಕ್ಷದ ಕಾರ್ಯಕರ್ತರಿಗೆ ಅಗತ್ಯ ಸಂದೇಶ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಮ್ಮದೇ ಆದ ಸಿದ್ಧಾಂತವಿದ್ದು, ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿದ್ದು, ಒಂದು ವೇಳೆ ಚುನಾವಣೆ ಪಕ್ಷಪಾತವಾದರೂ ಪಕ್ಷದ ಕಾರ್ಯಕರ್ತರಿಗೆ ಸಂದೇಶ ಕಳುಹಿಸುವುದನ್ನು ಮುಂದುವರೆಸುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮುಖಂಡರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಅವರು ಹೇಳಿದರು. 

ಡಿಜೆ ಹಳ್ಳಿ ಸುತ್ತಮುತ್ತಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಕಿರ್ ಬಂಧನ  ಕುರಿತಂತೆ ಪ್ರತಿಕ್ರಿಯಿಸಿದ ಡಿಕೆ  ಶಿವಕುಮಾರ್, ಜಾಕಿರ್ ಬಂಧನದ ಬಗ್ಗೆ ನ್ಯೂಸ್ ಪೇಪರ್ ನಲ್ಲಿ ನೋಡಿದ್ದೇನೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದ ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com