ನಾನು ಸಚಿವನಾಗದಿದ್ದರೆ ಆಕಾಶ ಬಿದ್ದು ಹೋಗುವುದಿಲ್ಲ: ಎಚ್ ವಿಶ್ವನಾಥ್ ಅಸಹಾಯಕ ನುಡಿ

ನಾನು ಮಂತ್ರಿ ಆಗಲೇಬೇಕು ಎಂದು ಆಸೆ ಇಟ್ಟುಕೊಂಡಿದ್ದವನಲ್ಲ. ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು. ಒಂದು ವೇಳೇ ತಾವು ಸಚಿವನಾಗದಿದ್ದರೂ ಆಕಾಶ ಬಿದ್ದುಹೋಗುವುದಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.
ಎಚ್ ವಿಶ್ವನಾಥ್
ಎಚ್ ವಿಶ್ವನಾಥ್

ಮೈಸೂರು: ನಾನು ಮಂತ್ರಿ ಆಗಲೇಬೇಕು ಎಂದು ಆಸೆ ಇಟ್ಟುಕೊಂಡಿದ್ದವನಲ್ಲ. ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು. ಒಂದು ವೇಳೇ ತಾವು ಸಚಿವನಾಗದಿದ್ದರೂ ಆಕಾಶ ಬಿದ್ದುಹೋಗುವುದಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿ ಮಾಡುವುದು, ಬಿಡುವುದು ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು, ಬಿಡುವುದು ಅವರಿಗೆ ಸೇರಿದೆ. ಕೊಟ್ಟ ಮಾತನ್ನು ಪಾಲಿಸುವುದು ಯಡಿಯೂರಪ್ಪ ಅವರ ಧರ್ಮ. ಎಲ್ಲರಿಗೂ ಕೊಟ್ಟಂತೆ ಮಂತ್ರಿಮಂಡಲದಲ್ಲಿ ಸ್ಥಾನ ಮಾಡಿಕೊಡುವಂತೆ ನನಗೂ ಮಾತು ಕೊಟ್ಟಿದ್ದಾರೆ. ಅವರು ಯಾರಿಗೆ ಕೊಡುತ್ತಾರೋ ಬಿಡುತ್ತಾರೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು

ಸೋತವರಿಗೆ ಸ್ಥಾನ ಕೊಡದಿರಲು ಕಾನೂನಿನ ನಿರ್ಬಂಧ ಇದೆ ಎಂದು ಹೇಳಿದ್ದಾರೆ. ಆದರೆ ಕಾನೂನಿನಲ್ಲಿ ಯಾವುದೇ ನಿರ್ಬಂಧವಿಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಬೇಡಿ ಎಂದು ಕೋರ್ಟ್ ಹೇಳಿಲ್ಲ. ಚುನಾವಣೆಗೆ ನಿಂತು ಪವಿತ್ರರಾಗಿ ಎಂದು ನ್ಯಾಯಾಲಯ ಹೇಳಿತ್ತು. ನಾವು ಚುನಾವಣೆಗೆ ಅರ್ಜಿ ಹಾಕುತ್ತಿದ್ದಂತೆ ಪವಿತ್ರರಾದೆವು. ತೀರ್ಪಿನಲ್ಲಿ ಸೋಲು ಗೆಲುವಿನ ಉಲ್ಲೇಖವಿಲ್ಲ. ಅದನ್ನು ಯಡಿಯೂರಪ್ಪ ಅವರು ಕಾನೂನು ತಜ್ಞರನ್ನು ಕರೆಸಿ ಕೇಳಿಕೊಳ್ಳಲಿ ಎಂದು ವಿಶ್ವನಾಥ್ ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com