ಬೆಂಗಳೂರು: ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ. ಸಿಎಂ ಯಡಿಯೂರಪ್ಪ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ನಮಗೆ ಅವಕಾಶ ಸಿಗುವ ಭರವಸೆ ಇದೆ ಎಂದು ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ.
ಇಂದು ನೂತನ ಸಚಿವರ ಪ್ರಮಾಣ ವಚನ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಎಂ ಅವರೇ ಖುದ್ದಾಗಿ ನನಗೆ ಆಹ್ವಾನ ನೀಡಿದ್ದು ಇಂದು ಭಾಗವಹಿಸುತ್ತಿದ್ದೇನೆ ಎಂದರು.
ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಂಟಿಬಿ ನಾಗರಾಜ್, ಹೊಸಕೋಟೆ ಸ್ಥಳೀಯ ಸಂಸ್ಥೆಯ ಚುನಾವಣೆ ವಿಚಾರವಾಗಿ ಚರ್ಚಿಸಲು ಸಿಎಂ ಪುತ್ರ ವಿಜಯೇಂದ್ರ ಅವರ ಜೊತೆ ಮಾತನಾಡಲು ಬಂದಿದ್ದೆ. ಶರತ್ ಬಚ್ಚೇಗೌಡ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು. ಅವಕಾಶ ಬಂದಾಗ ನನ್ನನ್ನೂ ಸಚಿವನನ್ನಾಗಿ ಮಾಡುತ್ತಾರೆ. ಅಲ್ಲಿಯವರೆಗೆ ಕಾಯುತ್ತೇನೆ. ಮುಂದೆ ಏನಾಗುತ್ತದೆಯೋ ನೋಡೋಣ ಎಂದರು.
Advertisement