ದೆಹಲಿ ಫಲಿತಾಂಶ ರಾಜಕೀಯ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದೆ, ಏನಂತೀರಾ: ಉಪೇಂದ್ರ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಇಡೀ ದೇಶವೇ ಮಾತನಾಡುತ್ತಿದ್ದು, ಸ್ಯಾಂಡಲ್ ವುಡ್ ಕೂಡ ಹೊರತಾಗಿಲ್ಲ ಹಲವು ನಟ, ನಟಿಯರು ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ್ದಾರೆ.
ಉಪೇಂದ್ರ
ಉಪೇಂದ್ರ

ಬೆಂಗಳೂರು: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಇಡೀ ದೇಶವೇ ಮಾತನಾಡುತ್ತಿದ್ದು, ಸ್ಯಾಂಡಲ್ ವುಡ್ ಕೂಡ ಹೊರತಾಗಿಲ್ಲ ಹಲವು ನಟ, ನಟಿಯರು ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬುದ್ಧಿವಂತ ನಟ, ಪ್ರಜಾಕೀಯ ಪಕ್ಷದ ಮುಖಂಡ ಉಪೇಂದ್ರ, “ಇಂದಿನ ದೆಹಲಿ ಚುನಾವಣಾ ಫಲಿತಾಂಶ ಇಡೀ ದೇಶದ ರಾಜಕೀಯ ಲೆಕ್ಕಾಚಾರ ತಲೆಕೆಳಗೆ ಮಾಡಿದೆ. ಜನರಿಗೆ ಉತ್ತಮ ಸರ್ಕಾರೀ ಶಾಲೆ, ಕಾಲೇಜು,ಆಸ್ಪತ್ರೆ, ವಿಧ್ಯುತ್, ರಸ್ತೆ ,ನೀರು, ಸುರಕ್ಷತೆ ಇಂತಹ ಅಗತ್ಯ ಸೌಲಭ್ಯ ಕೊಡುವ ಪ್ರಾದೇಶಿಕ ಪಕ್ಷಗಳು ಬೇಕು, ಏನಂತೀರಾ ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿಯೂ ಪ್ರಾದೇಶಿಕ ಪಕ್ಷ ಕಟ್ಟಿರುವ ಉಪೇಂದ್ರ, ಮತ್ತೊಂದು ಪ್ರಾದೇಶಿಕ ಪಕ್ಷದ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಜನರಿಗೆ ಉತ್ತಮ ಸೌಲಭ್ಯ ನೀಡುವ ಪ್ರಾದೇಶಿಕ ಪಕ್ಷಗಳು ಬೇಕು ಎಂದು ಉಪೇಂದ್ರ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com