ಸರ್ವಶಕ್ತ ಗೃಹ ಸಚಿವ ಅಮಿತ್ ಶಾ ಕಣ್ಮುಚ್ಚಿ ಕುಳಿತಿರುವುದೇ ದೆಹಲಿ ಗಲಭೆಗೆ ಕಾರಣ- ಸಿದ್ದರಾಮಯ್ಯ 

ಸರ್ವ ಶಕ್ತ ಗೃಹ ಸಚಿವ ಅಮಿತ್ ಶಾ ಕಣ್ಮುಚ್ಚಿ ಕೂತಿರುವುದೇ ಗಲಭೆಗೆ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಸರ್ವ ಶಕ್ತ ಗೃಹ ಸಚಿವ ಅಮಿತ್ ಶಾ ಕಣ್ಮುಚ್ಚಿ ಕೂತಿರುವುದೇ ಗಲಭೆಗೆ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಏಳುಜೀವಗಳನ್ನು ಬಲಿ ತೆಗೆದುಕೊಂಡ ದೆಹಲಿ ಗಲಭೆ ಅತ್ಯಂತ ಖೇದಕರವಾದರೂ ಅನಿರೀಕ್ಷಿತವೇನಲ್ಲ. ಬಿಜೆಪಿಯ ಸಚಿವರು, ಶಾಸಕರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾಗಲೂ ಅಮಿತ್ ಶಾ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ.

ಹಿಂಸಾಚಾರಕ್ಕೆ ಬಹಿರಂಗವಾಗಿ ಪ್ರಚೋದನೆ ನೀಡಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರನ್ನು ತಕ್ಷಣ ಬಂಧಿಸಬೇಕು. ಗಲಭೆ ಗ್ರಸ್ತ ಪ್ರದೇಶಕ್ಕೆ ಅವಶ್ಯಕ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿ ಭೀತಿಗ್ರಸ್ತ ಜನರಲ್ಲಿ ವಿಶ್ವಾಸ ತುಂಬಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com