ಕೆಪಿಸಿಸಿ ಅಧ್ಯಕ್ಷ, ಸಿಎಲ್'ಪಿ ನಾಯಕರ ನೇಮಕ ಕುರಿತು ಹೈಕಮಾಂಡ್ ಬಳಿ ಶೀಘ್ರದಲ್ಲೇ ಮನವಿ: ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಶೀಘ್ರದಲ್ಲೇ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. 
ಪರಮೇಶ್ವರ
ಪರಮೇಶ್ವರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಶೀಘ್ರದಲ್ಲೇ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತಂತೆ ಹಿರಿಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳುತ್ತೇವೆ. ಪಕ್ಷ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 

ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತಂತೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲ ಹಾಗೂ ಮನಸ್ತಾಪಗಳಿಲ್ಲ.ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com