ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

'ಪಾಕ್ ಮೇಲೆ ಪ್ರೀತಿ ಜಾಸ್ತಿಯಾಗಿದ್ದರೆ ಕುಮಾರಸ್ವಾಮಿ ಪಾಕಿಸ್ತಾನಕ್ಕೆ ಹೋಗಲಿ'

ಮಾಜಿ ಸಿಎಂ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಬೆಳೆದಿದೆ. ಹೀಗಾಗಿ ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗ: ಮಾಜಿ ಸಿಎಂ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಬೆಳೆದಿದೆ. ಹೀಗಾಗಿ ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಸಿದ್ದಾರಾಮೇಶ್ವರ ಸ್ವಾಮೀಜಿಯವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಭಾರತ ಭೂಪಟದಲ್ಲಿ ಪಾಕ್ ಇಲ್ಲವಾಗಿದ್ದರೆ ಬಿಜೆಪಿ ಮತ ಗಳಿಸದು ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.

ಈ ರೀತಿ ಡಬಲ್ ಸ್ಟ್ಯಾಂಡಿಂಗ್ ರಾಜಕಾರಣ ಮಾಡಬೇಡಿ, ಕುಮಾರಸ್ವಾಮಿ ಮಾತನಾಡುವಾಗ ಓಟ್ ಬ್ಯಾಂಕ್ ರಾಜಕಾರಣಕ್ಕೆ ಆ ರೀತಿ ಮಾತನಾಡುತ್ತಾರೆ. ಮಾಜಿ ಪ್ರಧಾನಿ ಮಂತ್ರಿಗಳ ಮಗನಾಗಿ, ಅದರಲ್ಲೂ ಮಾಜಿ ಮುಖ್ಯಮಂತ್ರಿಯಾಗಿ ನಿಮ್ಮ ಹೇಳಿಕೆಗಳು ಭಾರತಿಯರಿಗೆ ನೋವು ತರುತ್ತವೆ ವಾಗ್ದಾಳಿ ಎಂದರು.

ಸಿದ್ದರಾಮಯ್ಯ ಹೇಳಿಕೆಗೂ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಇಂಗ್ಲಿಷ್ ಪದ ಬಳಸಿ ಟೀಕಿಸುತ್ತಾರೆ. ಆದರೆ ಇತ್ತೀಚಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಯೂ ಕಾಣಿಸುತ್ತಿಲ್ಲ, ಯಾರಿಗೂ ಬೇಡವಾದ ವ್ಯಕ್ತಿ ಆಗಿದ್ದಾರೆ. ಅಲ್ಲದೆ ಕಾಂಗ್ರೆಸ್‍ನಲ್ಲಿ ವಿಪಕ್ಷ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಲಾಬಿ ನಡೆಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಡೆತ್ ಆಗಿರುವ ಪಾರ್ಟಿ ಆಗಿದೆ ಎಂದು ಕುಟುಕಿದರು.

Related Stories

No stories found.

Advertisement

X
Kannada Prabha
www.kannadaprabha.com