ಬೆಂಗಳೂರು: ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೆ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ ಎಂದು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೆ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ ಎಂದಿದ್ದಾರೆ.
ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ ಎಂದಿದ್ದಾರೆ.
Advertisement