ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಭವಿಷ್ಯದ ಮಂತ್ರಿ: ಬಿ.ಎಸ್ ಯಡಿಯೂರಪ್ಪ

ಶಾಸಕ ಎಂಎಲ್ ಎ ಸುಧಾಕರ್ ಭವಿಷ್ಯದ ಮಂತ್ರಿ ಎಂದು ಸಿಎಂ ಯಡಿಯೂರಪ್ಪ ಹೇಳುವ ಮೂಲಕ ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಡಾ.ಸುಧಾಕರ್
ಡಾ.ಸುಧಾಕರ್

ಮೈಸೂರು: ಶಾಸಕ ಎಂಎಲ್ ಎ ಸುಧಾಕರ್ ಭವಿಷ್ಯದ ಮಂತ್ರಿ ಎಂದು ಸಿಎಂ ಯಡಿಯೂರಪ್ಪ ಹೇಳುವ ಮೂಲಕ ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

ಜೆಎಸ್ ಎಸ್ ಸುತ್ತೂರು ಮಠದಲ್ಲಿ ಆಯೋಜಿಸಿದ್ದ  ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು,  ಮುಂದಿನ ಸಂಪುಟ ವಿಸ್ತರಣೆಯಲ್ಲಿ ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತ ಎಂದು ಹೇಳಿದ್ದಾರೆ. 

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಇದಕ್ಕೂ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸುಧಾಕರ್ ಅವರನ್ನು ಭವಿಷ್ಯದ ಸಚಿವ ಎಂದು ಬಣ್ಣಿಸಿದ್ದು ಗಮನಾರ್ಹ. ಸಚಿವರಾಗಲಿರುವ ಸುಧಾಕರ್ ಎಂದು ಯಡಿಯೂರಪ್ಪ ತಮ್ಮ ಸ್ವಾಗತ ಭಾಷಣದಲ್ಲಿ ಸಂಬೋಧಿಸಿದ್ದರು. ಇದು ಸುಧಾಕರ್ ಅವರಿಗೆ ಸಚಿವ ಪಟ್ಟ ಸಿಗುವುದು ಬಹುತೇಕ ಖಾತ್ರಿ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇವತ್ತಿನ ಸುತ್ತೂರು ಜಾತ್ರಾ ಮಹೋತ್ಸವದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಅಕ್ಕಪಕ್ಕದಲ್ಲಿ ಆಸೀನರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com