ಬೆಂಗಳೂರು: ಚೀನಾ ಸೇನೆ ಒಳಬಂದಿದೆ ಎನ್ನಲು ರಾಹುಲ್ ಗಾಂಧಿ ಅಲ್ಲಿಗೆ ತೆರಳಿದ್ದರೆ? ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಚೀನಾ ಸೇನೆ ಎರಡು ಕಿ.ಮೀ. ಹಿಂದೆ ಸರಿದಿದೆ ಎಂದು ಹೇಳಲು ನೀವೇನು ರಕ್ಷಣಾ ಸಚಿವರೇ’ ಎಂದು ಬಿ.ಎಲ್. ಸಂತೋಷ್ ಅವರನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರ ಟ್ವೀಟ್ಗೆ ಉತ್ತರಿಸಿರುವ ನಳಿನ್, ‘ಗಡಿಯಲ್ಲಿ ಸ್ಥಿತಿಯೇನು? ಅದರ ಪ್ರಕ್ರಿಯೆಗಳೇನು ಅರಿಯಿರಿ. ತಂತ್ರಜ್ಞಾನದ ಯುಗದಲ್ಲಿ ಸುಳ್ಳು ಹೇಳಿ ಜನರನ್ನು ನಂಬಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.
ಭಾರತೀಯರಿಗೆ ನಮ್ಮ ಪ್ರಧಾನಿ ಬಗ್ಗೆ ಅಪಾರ ನಂಬಿಕೆಯಿದೆ. ಹಾಗಾಗಿಯೇ ಜನ ಅವರ ಬೆಂಬಲಕ್ಕೆ ನಿಂತಿದ್ದಾರೆ. ಪಿಎಂ ಕೇರ್ ಫಂಡ್ ಕುರಿತು ಸೂಕ್ತ ಸಮಯದಲ್ಲಿ ಮಾಹಿತಿ ದೊರೆಯಲಿದೆ ಎಂದು ಟ್ಟಿಟ್ಟರ್ ನಲ್ಲಿ ಹೇಳಿದ್ದಾರೆ.
ನೀವು ಡಿಕೆಶಿಗೆ ನೀಡುತ್ತಿರುವ ಬೆಂಬಲ ಎಂಥದ್ದು? ಕಾಂಗ್ರೆಸ್ನೊಳಗೆ ನೀವು ನಡೆಸಿದ ರಾಜಕೀಯವೇನು ಕಡಿಮೆಯೇ? ನಿಮ್ಮನ್ನು ಪಕ್ಷಕ್ಕೆ ಕರೆತರಲು ಕಾರಣೀಕರ್ತರಾದ ಎಚ್. ವಿಶ್ವನಾಥ ಅವರೇ ಪಕ್ಷ ತೊರೆಯುವಂತಾಯಿತಲ್ಲವೆ? ಎಲ್ಲರೂ ನಿಮ್ಮಂತೆ ಎಂದು ಭಾವಿಸಬೇಡಿ. ಬೇರೆಯವರ ಬಾಳೆಯಲ್ಲಿನ ನೊಣ ನೋಡುವುದು ಬಿಡಿ ಎಂದು ಟಾಂಗ್ ನೀಡಿದ್ದಾರೆ.
Advertisement