ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ: ನಳಿನ್​​ ಕುಮಾರ್​ ಕಟೀಲ್ ತಿರುಗೇಟು

ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ತಿರುಗೇಟು ನೀಡಿದ್ಧಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಕೊಡಗು: ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ತಿರುಗೇಟು ನೀಡಿದ್ಧಾರೆ. 

ಮಡಿಕೇರಿಯಲ್ಲಿ ಮಾತನಾಡಿದ ಅವರು, ಮೆಡಿಕಲ್​​ ಕಿಟ್​​​​ ಖರೀದಿಯಲ್ಲಿ ಅವ್ಯವಹಾರ ಎಂದು ಆರೋಪಿಸಿರುವ ಸಿದ್ದರಾಮಯ್ಯ ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನುವುದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಈಶ್ವರ ಕಂಡ್ರೆ ಅವರು ಮನೆ ನಿರ್ಮಿಸುವಾಗ ಎಷ್ಟು ಲೂಟಿ ಹೊಡೆದರು ಎನ್ನೋದು ಗೊತ್ತಿದೆ. ಅದೆಲ್ಲವನ್ನೂ ಮೊದಲು ರಾಜ್ಯದ ಜನತೆ ಮುಂದಿಡಲಿ, ಆಮೇಲೆ ರಾಜ್ಯ ಬಿಜೆಪಿ ಸರ್ಕಾರದ ಅವ್ಯವಹಾರದ ಬಗ್ಗೆ ಮಾತನಾಡಲಿ ಎಂದು ನಳಿನ್​​ ಕುಮಾರ್​ ಕಟೀಲ್​​ ಸವಾಲೆಸೆದಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com